HomeStateProtest : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಸಣ ಕಾರ್ಮಿಕರ ಪ್ರತಿಭಟನೆ...!

Protest : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಸಣ ಕಾರ್ಮಿಕರ ಪ್ರತಿಭಟನೆ…!

Protest – ಸ್ಮಶಾನಕ್ಕೆ ಒಬ್ಬ ಕಾವಲಗಾರನ ನೇಮಕ, ಸ್ಮಶಾನ ಕಾರ್ಮಿಕರಿಗೆ 5 ಸಾವಿರ ಮಾಶಾಸನ, ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ  ಒತ್ತಾಯಿಸಿ ಹಾಗೂ ನಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ  ಒತ್ತಾಯಿಸಿ ಪತ್ರಚಳುವಳಿ ಮೂಲಕ ಮುಖ್ಯಮಂತ್ರಿಗಳಿಗೆ ಮಸಣ ಕಾರ್ಮಿಕರು ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Labour protest in bagepalli

ಈ ಸಂದರ್ಭದಲ್ಲಿ  ಮಸಣ ಕಾರ್ಮಿಕರ ಜಿಲ್ಲಾ ಸಂಚಾಲಕ ಕೆ. ಮುನಿಯಪ್ಪ ಮಾತನಾಡಿ, ಕಳೆದ ಹಲವಾರು  ವರ್ಷಗಳಿಂದ ಸ್ಮಶಾನಗಳಲ್ಲಿ ಶವ ಹೂಳುವ, ಸುಡುವ, ಹಲಗೆ ಬಾರಿಸುವ ಮತ್ತು ಸ್ಮಶಾನಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನು ಇದುವರೆಗೂ ಉಚಿತವಾಗಿ ಮಾಡುತ್ತಾ ಬಂದಿದ್ದಾರೆ. ಇದರಿಂದಾಗಿ ನೂರಾರು ಕುಟುಂಬಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿವೆ. ಇದನ್ನು ಸಾರ್ವಜನಿಕರ ಸೇವೆಯೆಂದು ಇದುವರೆಗೂ ಯಾರೂ ಗುರುತಿಸಿಲ್ಲ. ಆದ್ದರಿಂದ ಉಚಿತ ಕೆಲಸದಿಂದ ಮುಕ್ತಿಗೊಳಿಸಿ ವೇತನ ನೀಡುವಂತೆ ಆಗ್ರಹಿಸಿದರು.

ಮಸಣ ಕಾರ್ಮಿಕರೆಂದು ಸರ್ಕಾರಿದಂದ ಅಧಿಕೃತವಾಗಿ ಗುರುತಿಸಬೇಕು, ಕೂಡಲೇ ಗಣತಿ ಮಾಡಬೇಕು, 45ವರ್ಷ ವಯಸ್ಸು ಮೇಲ್ಪಟ್ಟವರಿಗೆ ಮಾಸಾಶನ ನೀಡಬೇಕು.  ಸ್ಮಶಾಸ ಕಾರ್ಮಿಕರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ಸಾಲ ಸೌಲಭ್ಯ, ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಸೌಲಭ್ಯ ಕಲಿಸುವಂತೆ ಹಾಗೂ ತಮಟೆ ಕಲಾವಿದರನ್ನು ಗ್ರಾ.ಪಂ ನೌಕರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ  ಮಸಣ ಸಂಘಟನೆಯ ಸುಬ್ಬರಾಯಪ್ಪ, ನರಸಿಂಹಪ್ಪ, ಪರಗೋಡು ನರಸಿಂಹಪ್ಪ,ಬಾಬು, ಮುನಿಯಪ್ಪ, ನರಸಮ್ಮ, ಆದಿನಾರಾಯಣಪ್ಪ, ಶ್ರೀರಾಮಪ್ಪ, ಕೃಷ್ಣಪ್ಪ, ವೆಂಕಟೇಶ್ ಮೂರ್ತಿ, ನಾರಾಯಣ ಮತ್ತಿತರರು ಇದ್ದರು.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular