Sunday, June 1, 2025
HomeStateLocal News - ಚಿಕ್ಕಕುರುಬರಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷರಾಗಿ ನಾಗರಾಜರೆಡ್ಡಿ ಅವಿರೋಧ ಆಯ್ಕೆ….!

Local News – ಚಿಕ್ಕಕುರುಬರಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷರಾಗಿ ನಾಗರಾಜರೆಡ್ಡಿ ಅವಿರೋಧ ಆಯ್ಕೆ….!

Local News : ಗುಡಿಬಂಡೆ ತಾಲೂಕಿನ ಚಿಕ್ಕಕುರುಬರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮ ರವರುಗಳು ಆಯ್ಕೆಯಾಗಿದ್ದಾರೆಂದು ಮಂಜುನಾಥ್ ತಿಳಿಸಿದರು. ಈ ವೇಳೆ ಬೈರಪ್ಪ, ನಂದೀಶ್, ಜೀವಿಕ ನಾರಾಯಣಸ್ವಾಮಿ, ಅಶ್ವತ್ಥಪ್ಪ, ಜಗದೀಶ್, ವೆಂಕಟೇಶಪ್ಪ, ಬಾಲೇನಹಳ್ಳಿ ರಮೇಶ್,  ಅಂಜಿನಪ್ಪ ಸೇರಿದಂತೆ ಹಲವರು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Chikkakurubarahalli VSNN President Election 0

ತಾಲೂಕಿನ ಚಿಕ್ಕಕುರುಬರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಈಗಾಗಲೇ ನಿರ್ದೇಶಕರುಗಳ ಆಯ್ಕೆ ನಡೆದಿತ್ತು. ಜ.27 ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮ ರವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಚುನಾವಣಾಧಿಕಾರಿ ತಿಳಿಸಿದರು.

Chikkakurubarahalli VSNN President Election 2

ಇನ್ನೂ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಪಾವಜೇನಹಳ್ಳಿ ನಾಗರಾಜರೆಡ್ಡಿ ಮಾತನಾಡಿ, ನನ್ನನ್ನು ಎರಡನೇ ಬಾರಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಕಳೆದ ಬಾರಿ 80 ಲಕ್ಷ ಸಾಲ ನೀಡುವ ಗುರಿಯನ್ನು ಇಟ್ಟುಕೊಂಡಿದ್ದೇವು. ಈ ಬಾರಿ ರೈತರಿಗೆ, ಮಹಿಳಾ ಸಂಘಗಳಿಗೆ, ಕುರಿ, ಕೋಳಿ ಶೆಡ್ ನಿರ್ಮಾಣ ಮಾಡಲು ಸಾಲ ವಿತರಣೆ ಮಾಡುತ್ತೇವೆ. ಇದಕ್ಕಾಗಿ 1 ಕೋಟಿ ಸಾಲ ನೀಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ನಮ್ಮ ಸಹಕಾರ ಸಂಘದ ಮೂಲಕ ಸಂಘದ ವ್ಯಾಪ್ತಿಯಲ್ಲಿ ರೈತರನ್ನು ಅಭಿವೃದ್ದಿ ಮಾಡುವ ಮುಖ್ಯ ಉದ್ದೇಶವನ್ನು ನಮ್ಮ ಆಡಳಿತ ಮಂಡಳಿ ಹೊಂದಿದೆ ಎಂದು ತಿಳಿಸಿದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular