E Khata – ಸರ್ಕಾರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಸಮರ್ಪಕ ದಾಖಲೆ ಇಲ್ಲದ ಆಸ್ತಿಗಳ ಮಾಲೀಕರು ನೇರವಾಗಿ ಇ-ಖಾತಾ ಮಾಡಿಸಿಕೊಳ್ಳುವ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ಜನತೆಗೆ ಅನುಕೂಲ ಮಾಡುವ ಉದ್ದೇಶದಿಂದ ಇ-ಖಾತಾ ಆಂದೋಲನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನವನ್ನು ಜನರು ಸದ್ಬಳಕೆ ಮಾಡಿಕೊಳ್ಳಿ ಎಂದು ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಬಾ ಶಿರೀನ್ ಮನವಿ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇ-ಖಾತಾ ಅಭಿಯಾನದ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನವನ್ನು ಜಾರಿ ಮಾಡಿದೆ. ಈ ಅಭಿಯಾನವನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಹಲವರಲ್ಲಿ ಈ ಬಿ-ಖಾತೆ ಮಾಡಿಸಿಕೊಂಡರೇ ಅದಕ್ಕೆ ಬೆಲೆಯಿಲ್ಲ ಎಂಬ ಅನುಮಾನ ಇದೆ. ಆದರೆ ಬಿ-ಖಾತಾಗೂ ಬೆಲೆಯಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದರು. ಆದಷ್ಟು ಶೀಘ್ರವಾಗಿ ಜನರು ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದಂತೆ ಬಿ-ಖಾತಾ ಮಾಡಿಸಿಕೊಳ್ಳಬೇಕು ಎಂದರು.

ಬಳಿಕ ಪ.ಪಂ ಅಧ್ಯಕ್ಷ ವಿಕಾಸ್ ಮಾತನಾಡಿ, ಜನರು ತಮ್ಮ ಸ್ವತ್ತುಗಳಿಗೆ ಖಾತಾ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳ ಬಳಿ ಹೋಗದೆ ಈ ಅಭಿಯಾನದ ಮೂಲಕ ನೇರವಾಗಿ ಸ್ಥಳೀಯ ಸಂಸ್ಥೆಗಳ ಕಚೇರಿಗೆ ಹೋಗಿ ದಾಖಲೆಗಳನ್ನು ಸಲ್ಲಿಸಿ ಇ-ಖಾತೆ ಪಡೆಯಬಹುದಾಗಿದೆ. ಸರ್ಕಾರ ನೀಡಿರುವ ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ. ಜನರು ನೇರವಾಗಿ ಪುರಸಭೆ ಕಚೇರಿಗೆ ಬಂದು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ನಿಮ್ಮ ಆಸ್ತಿಯ ಇ-ಖಾತೆ ಮಾಡಿಕೊಡಲಾಗುವುದು ಎಂದರು.
ಇದೇ ಸಮಯದಲ್ಲಿ ಪ.ಪಂ ಸದಸ್ಯ ಇಸ್ಮಾಯಿಲ್ ಅಜಾದ್ ಬಾಬು, ನಾಮಿನಿ ಸದಸ್ಯ ಅಂಬರೀಶ್ ಇ-ಖಾತಾ ಅಭಿಯಾನದ ಕುರಿತು ಜನರಿಗೆ ಅರಿವು ಮೂಡಿಸಿದರು. ಈ ಸಮಯದಲ್ಲಿ ಪಪಂ ಉಪಾಧ್ಯಕ್ಷ ಗಂಗರಾಜು, ಸದಸ್ಯರಾದ ಬಷೀರ್, ಪಪಂ ಸಿಬ್ಬಂದಿಯಾದ ಬಾಲಪ್ಪ ಸೇರಿದಂತೆ ಹಲವರು ಇದ್ದರು.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
