HomeStateSSLC Exam : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ : ಸುಬ್ಬಾರೆಡ್ಡಿ

SSLC Exam : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ : ಸುಬ್ಬಾರೆಡ್ಡಿ

ಇನ್ನೇನು ಕೆಲವೇ ದಿನಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದುವ ಮೂಲಕ ಉತ್ತಮ ಸಾಧನೆ ಮಾಡಬೇಕು, ಜೊತೆಗೆ ಜಿಲ್ಲೆಯಲ್ಲಿ ಗುಡಿಬಂಡೆ ಪ್ರಥಮ ಸ್ಥಾನ ಬರುವಂತೆ ಮಾಡಬೇಕೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ : ಸುಬ್ಬಾರೆಡ್ಡಿ

SSLC – ಉತ್ತಮ ಅಂಕ ಪಡೆದು ಪೋಷಕರಿಗೆ ಒಳ್ಳೆಯ ಹೆಸರು ತಂದುಕೊಡಿ

ಈ ವೇಳೆ ವಿದ್ಯಾರ್ಥಿಗಳಿಗೆ ಸಲಹೆ ನೀಡುತ್ತಾ, 10ನೇ ತರಗತಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಪ್ರಮುಖವಾದ ಘಟ್ಟ. ಆದರೆ ಹಲವು ವಿದ್ಯಾರ್ಥಿಗಳು ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಇದರಿಂದ ಕಡಿಮೆ ಅಂಕಗಳು ಬಂದು ತಮ್ಮ ಪೋಷಕರಿಗೆ ಸಮಸ್ಯೆಯಾಗುತ್ತದೆ. ಜೊತೆಗೆ ತಮಗೆ ಒಳ್ಳೆಯ ಕಾಲೇಜುಗಳಲ್ಲಿ ಓದಬೇಕೆಂಬ ಮನಸ್ಸು ಇರುತ್ತದೆ. ಆದರೆ ತಾವು ಪಡೆದುಕೊಂಡ ಅಂಕಗಳು ಒಳ್ಳೆಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆಯಲು ಆಗುವುದಿಲ್ಲ. ಆಗ ನಿಮ್ಮ ಪೋಷಕರು ನಮ್ಮಂತಹ ರಾಜಕೀಯ ನಾಯಕರ ಬಳಿ ಬಂದು ಸೀಟ್ ಗಾಗಿ ಕೇಳಬೇಕು. ಆದ್ದರಿಂದ ನೀವುಗಳು ಕಠಿಣ ಪರಿಶ್ರಮದಿಂದ ಓದುವ ಮೂಲಕ ಉತ್ತಮ ಅಂಕಗಳನ್ನು ಪಡೆದು ತಮ್ಮ ಪೋಷಕರಿಗೆ ಒಳ್ಳೆಯ ಹೆಸರು ತಂದುಕೊಡಬೇಕು ಎಂದರು.

SSLC – ಜಿಲ್ಲೆಗೆ ಮೊದಲ ಸ್ಥಾನ ಪಡೆಯಬೇಕು

ಇದೇ ಸಮಯದಲ್ಲಿ ಮಾತನಾಡಿದ ಶಾಸಕರು ಈಗಾಗಲೇ ನನ್ನ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಸ್ಥಾನ ಬರಲು ಶ್ರಮಿಸುವಂತೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದ್ದೇನೆ. ಜೊತೆಗೆ ಹಲವು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಹ ಮಾಡಿದ್ದೇನೆ. ಗುಡಿಬಂಡೆ ಕಳೆದೆರಡು ವರ್ಷಗಳ ಹಿಂದೆ ಗುಡಿಬಂಡೆ ರಾಜ್ಯ ಮಟ್ಟಕ್ಕೆ ಮೊದಲ ಸ್ಥಾನ ಬಂದಿತ್ತು. ಇದೀಗ ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಬರಲು ಎಲ್ಲರೂ ಶ್ರಮಿಸಬೇಕು. ಶಿಕ್ಷಣಕ್ಕೆ ಸಂಬಂಧಿಸಿದಂತೆ ತಮಗೆ ಏನೇ ಸಮಸ್ಯೆಗಳಿದ್ದರೂ ನನ್ನನ್ನು ಸಂಪರ್ಕ ಮಾಡಿ ಅದನ್ನು ಬಗೆಹರಿಸುವಂತಹ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ : ಸುಬ್ಬಾರೆಡ್ಡಿ

ಈ ಸಮಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ರಾಜಶೇಖರ್‍ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಮುಖಂಡರು ಹಾಜರಿದ್ದರು.

by Balajihttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments

John Doe on TieLabs White T-shirt