Sunday, June 1, 2025
HomeStateAccident - ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ...

Accident – ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಸಾವು

Accident – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44 ವರ್ಲಕೊಂಡ ಬಳಿ ನಿಯಂತ್ರಣ ತಪ್ಪಿ ಇನೋವಾ ಕಾರೊಂದು ಪಲ್ಟಿ ಹೊಡೆದಿದ್ದು, ಈ ಅಪಘಾತದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಮೃತಪಟ್ಟಿದ್ದಾರೆ.

Accident – ಬಾಗೇಪಲ್ಲಿ ಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ನಡೆದ ಘಟನೆ

ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಬಾಗೇಪಲ್ಲಿಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗುವಾಗ ಈ ದುರಂತ ನಡೆದಿದೆ. ಮೃತರು ತಮ್ಮ ವಕೀಲ ಸ್ನೇಹಿತರೊಂದಿಗೆ ಬೆಂಗಳೂರಿನತ್ತ ಪ್ರಯಾಣ ನಡೆಸುತ್ತಿದ್ದರು ಎನ್ನಲಾಗಿದೆ. ಇನೋವಾ ಕಾರು ಚಲಾಯಿಸುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ.

Accident Gudibande

Accident – ಕಾರಿನ ಟೈಯರ್ ಸಿಡಿದ ಪರಿಣಾಮ ಸಂಭವಿಸಿದ ಅಪಘಾತ

ಕಾರಿನ ಟೈಯರ್ ಸಿಡಿದು ಹತ್ತಾರು ಪಲ್ಟಿ ಹೊಡೆದ ಕಾರು ರಸ್ತೆ ಬದಿಯಿದ್ದ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಲ್ಲಿ ಗಾಯಗೊಂಡ ವಕೀಲ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Accident – ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಇನ್ನೂ ಮೃತ ದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಂಬಂಧ ಮೃತ ಚೆನ್ನಕೃಷ್ಣಪ್ಪ ಅವರ ಮಗ ಅನುಮಾನ ವ್ಯಕ್ತಪಡಿಸಿ ದೂರಿದ್ದಾರೆ ಎನ್ನಲಾಗಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular