Local News : ಜನರು ಪರೋಪಕಾರ ಮನೋಭಾವ ಬೆಳೆಸಿಕೊಂಡು, ಸಮಾಜ ಸೇವೆ ಮಾಡಬೇಕು: ಕೆ.ನಾರಾಯಣ

Local News – ನಾವೆಲ್ಲರೂ ‘ನಾನು, ನನ್ನ ಕುಟುಂಬ’ ಎಂದು ಭಾವಿಸದೆ, ನಮಗೆ ಜನ್ಮವಿತ್ತ ಪ್ರಕೃತಿಗೆ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಬೇಕು. ಪರೋಪಕಾರ ಮನೋಭಾವ ಬೆಳೆಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಅತಿ ಮುಖ್ಯ ಎಂದು ರಾಜ್ಯಸಭಾ ಸದಸ್ಯ ಕೆ. ನಾರಾಯಣ್ ಅವರು ಕರೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ರಾಜ್ಯಸಭಾ ಸದಸ್ಯರ ಅನುದಾನದಡಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Local News - Rajya Sabha MP K. Narayan speaking at the road inauguration ceremony in Kondavalahalli village

Local News – ಪ್ರಕೃತಿ, ಸಮಾಜಕ್ಕೆ ನಮ್ಮ ಕೊಡುಗೆ ಏನು?

ನಾರಾಯಣ್ ಅವರು ತಮ್ಮ ಭಾಷಣದಲ್ಲಿ, “ಪ್ರತಿಯೊಬ್ಬ ಜೀವಿಯೂ ಹುಟ್ಟುತ್ತದೆ, ಸಾಯುತ್ತದೆ. ಆದರೆ ಆ ಸಾವು ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿದಿರುವುದಿಲ್ಲ. ಒಂದು ಮರ ತಾನು ಸತ್ತರೂ ಇತರರಿಗೆ ಉಪಯೋಗವಾಗುತ್ತದೆ. ಇದನ್ನೇ ಮರ ಬಯಸುತ್ತದೆ. ಪ್ರಕೃತಿ ನಮಗೆ ಸಾಕಷ್ಟು ನೀಡಿದೆ, ಅದಕ್ಕೆ ನಾವು ಚಿಕ್ಕ ಸೇವೆ ಎಂದು ಭಾವಿಸಬೇಕು” ಎಂದು ಹೇಳಿದರು.

“ಅದೇ ರೀತಿ ಮನುಷ್ಯರಾದ ನಾವು ಪ್ರಕೃತಿಯಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ನಮ್ಮ ಸುತ್ತಮುತ್ತಲಿನ ಜನರೊಂದಿಗೆ ಜಾತಿ ಬೇಧ ಮರೆತು ಎಲ್ಲರೂ ಒಂದೇ ಕುಟುಂಬದಂತೆ ಬದುಕಬೇಕು. ಜೊತೆಗೆ ಪರರಿಗೂ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಮಗೆ ಜನ್ಮ ಕೊಟ್ಟ ಭೂಮಿಗೆ ನಮ್ಮಿಂದಾಗುವ ಸೇವೆಯನ್ನು ಮಾಡಬೇಕು” ಎಂದು ಅವರು ಒತ್ತಿ ಹೇಳಿದರು.

Local News – ಸಂಸದರ ಆದರ್ಶ ಗ್ರಾಮ ಯೋಜನೆ: ಗ್ರಾಮಗಳ ಅಭಿವೃದ್ಧಿಗೆ ಹೊಸ ಹೆಜ್ಜೆ

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳನ್ನು ದತ್ತು ಪಡೆಯಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ನಾರಾಯಣ್ ತಿಳಿಸಿದರು. “ನನ್ನ ಪತ್ರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಡೆಹಿಡಿಯಲಾಗಿದೆ. ನಾನು ನೀಡಿದ ಗ್ರಾಮಕ್ಕೆ ಅನುಮೋದನೆ ದೊರೆತರೆ, ಆ ಗ್ರಾಮಕ್ಕೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲಾ ಅನುದಾನವೂ ಸಿಗುತ್ತದೆ. ಇದರಿಂದ ಗ್ರಾಮ ಮತ್ತಷ್ಟು ಅಭಿವೃದ್ಧಿಯಾಗುತ್ತದೆ” ಎಂದು ಅವರು ಭರವಸೆ ನೀಡಿದರು. ಅಲ್ಲದೆ, ಗ್ರಾಮಗಳಲ್ಲಿ ಪ್ರತಿಯೊಬ್ಬರೂ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು ಎಂದು ಸಲಹೆ ನೀಡಿದರು.

Local News – ಗ್ರಾಮ ವಿಕಾಸ ಸಂಸ್ಥೆಯಿಂದ ಗ್ರಾಮಗಳ ಪ್ರಗತಿ

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡ ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ವಿಕಾಸ ಸಂಸ್ಥೆಯು ತಮ್ಮ ಗ್ರಾಮಕ್ಕೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೇಸಿಗೆ ಶಿಬಿರ, ಬಾಲ ಸಂಗಮ ಕಾರ್ಯಕ್ರಮ ಸೇರಿದಂತೆ ರಸ್ತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಹ ಕೈಗೊಂಡಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಜಾತಿ ಬೇಧವಿಲ್ಲ. ಎಲ್ಲರೂ ಅನ್ಯೋನ್ಯವಾಗಿ, ಸಹೋದರರಂತೆ ಬದುಕುತ್ತಾರೆ. ಮುಂದಿನ ದಿನಗಳಲ್ಲೂ ಇದೇ ರೀತಿ ಸೌಹಾರ್ದತೆಯಿಂದ ಇರುತ್ತೇವೆ” ಎಂದು ಅವರು ಹೇಳಿದರು.

Local News - Rajya Sabha MP K. Narayan speaking at the road inauguration ceremony in Kondavalahalli village

Read this also : ಅದ್ದೂರಿಯಾಗಿ ನೆರವೇರಿದ ಗಾಯತ್ರಿ ಮಂದಿರದ 36ನೇ ವಾರ್ಷಿಕೋತ್ಸವ

ಕಾರ್ಯಕ್ರಮದಲ್ಲಿ ಗ್ರಾಮ ವಿಕಾಸ ಸಂಸ್ಥೆಯ ಮುಖ್ಯಸ್ಥ ಶ್ರೀಧರ್ ಸಾಗರ್ ಜೀ, ಸಾವಯವ ಕೃಷಿ ತಾಲೂಕು ಸಂಯೋಜಕ ವಾಹಿನಿ ಸುರೇಶ್, ಗ್ರಾಮದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Scroll to Top