Accident – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೆಣ್ಣೆಪರ್ತಿ ಕ್ರಾಸ್ ಬಳಿ ಬೈಕ್ ಹಾಗೂ ಬುಲೆರೋ ಗೂಡ್ಸ್ ವಾಹನ ನಡುವೆ ನಡೆದ ಅಪಘಾತ ನಡೆದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸುತ್ತಿರುವಾಗ ಮಾರ್ಗದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
Accident – ಬುಲೆರೋ ಡಿಕ್ಕಿ, ಬೈಕ್ ಸವಾರ ಸಾವು
ಗುಡಿಬಂಡೆ ಬಾಗೇಪಲ್ಲಿ ಮಾರ್ಗದ ಬೆಣ್ಣೆಪರ್ತಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಬಾಗೇಪಲ್ಲಿ ಕಡೆಯಿಂದ ಗುಡಿಬಂಡೆ ಕಡೆಗೆ ಬರುತ್ತಿದ್ದ ಬುಲೆರೋ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬುಲೆರೋ ವಾಹನ ಅತಿಯಾದ ವೇಗದ ಜೊತೆಗೆ ರಾಂಗ್ ರೂಟ್ ನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡುವ ಮಾರ್ಗ ಮಧ್ಯೆಯೇ ಬೈಕ್ ಸವಾರ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
Accident – ಬೆಣ್ಣೆಪರ್ತಿ ಕ್ರಾಸ್: ಅಪಾಯಕಾರಿ ತಿರುವು, ಹೆಚ್ಚಿದ ಆತಂಕ!
ಗುಡಿಬಂಡೆ ಅಪಘಾತ ವಲಯ: ಬೆಣ್ಣೆಪರ್ತಿ ಕ್ರಾಸ್ ಪದೇ ಪದೇ ಅಪಘಾತಗಳಿಗೆ ಸಾಕ್ಷಿಯಾಗುತ್ತಿದೆ. ಈ ಪ್ರದೇಶದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೂಡ ಇದೇ ಸ್ಥಳದಲ್ಲಿ ಹಲವು ಅಪಘಾತಗಳು ಸಂಭವಿಸಿದ್ದು, ಅಮೂಲ್ಯ ಜೀವಗಳು ಬಲಿಯಾಗಿವೆ. ಇನ್ನೂ ಘಟನಾ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.