Wednesday, January 21, 2026
HomeStateLocal News : ಗುಡಿಬಂಡೆಯಲ್ಲಿ 5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

Local News : ಗುಡಿಬಂಡೆಯಲ್ಲಿ 5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಪಂ ವ್ಯಾಪ್ತಿಯ ನಲ್ಲಗೊಂಡಯ್ಯಗಾರಿ ಹಳ್ಳಿ ಹಾಗೂ ಪುಲಸಾನಿವೊಡ್ಡು ಮಾರ್ಗದ ಮಧ್ಯೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.

MLA Subba Reddy performing Bhoomi Pooja for ₹5 crore bridge construction in Gudibande taluk, Chikkaballapur district - Local News

Local News – ₹5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಸೇತುವೆ

ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಲ್ಲಗೊಂಡಯ್ಯಗಾರಿ ಹಳ್ಳಿ ಹಾಗೂ ಪುಲಸಾನಿವೊಡ್ಡು ಗ್ರಾಮದ ಜನತೆಗೆ ಈ ಮಾರ್ಗದಲ್ಲಿ ಸಂಚರಿಸಲು ತುಂಬಾ ಸಮಸ್ಯೆಯಾಗಿತ್ತು, ಅದರಲ್ಲೂ ಮಳೆಗಾಲದಲ್ಲಿ ಈ ಮಾರ್ಗದಲ್ಲಿ ಓಡಾಡುವುದೇ ಕಷ್ಟಕರವಾಗಿತ್ತು. ಈ ಭಾಗದಲ್ಲಿ ಒಂದು ಕಾಲುವೆ ಹರಿಯುತ್ತಿದ್ದು ಅದರ ಮೇಲೆ ಸೇತುವೆ ನಿರ್ಮಾಣ ಮಾಡಿಕೊಡಲು ಗ್ರಾಮಸ್ಥರು ಮನವಿ ಮಾಡಿದ್ದರು. ಅವರ ಮನವಿಯಂತೆ ಇಂದು 5 ಕೋಟಿ ಅನುದಾನದಲ್ಲಿ ಸೇತುವೆ ಕಾಮಗಾರಿ ನಿರ್ಮಾಣವಾಗಲಿದೆ. ಇದರ ಜೊತೆಗೆ ಗುಂಡ್ಲಹಳ್ಳಿ, ಭತ್ತಲಹಳ್ಳಿ ಭಾಗದಲ್ಲೂ ಸಹ ಸೇತುವೆ ನಿರ್ಮಾಣ ಮಾಡಲು ಅನುದಾನಕ್ಕಾಗಿ ಮನವಿ ಮಾಡಲಾಗಿದೆ. ಆದಷ್ಟು ಶೀಘ್ರ ಆ ಕಾಮಗಾರಿಗಳಿಗೂ ಚಾಲನೆ ನೀಡಲಾಗುವುದು ಎಂದರು. Read this also : ವಿದೇಶಿ ದಂಪತಿಗಳು ಜೀರ್ಣೋದ್ಧಾರ ಮಾಡಿದ ಭಾರತದ ಏಕೈಕ ಶಿವ ದೇವಾಲಯದ ಬಗ್ಗೆ ನಿಮಗೆ ಗೊತ್ತೇ?

Local News – ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಸೂಚನೆ

ಇನ್ನೂ ಗ್ರಾಮಸ್ಥರು ಈ ಕಾಮಗಾರಿ ನಡೆಯುವಾಗ ಪರಿಶೀಲಿಸಬೇಕು. ಕಾಮಗಾರಿಯಲ್ಲಿ ಏನಾದರೂ ಲೋಪ ಕಂಡುಬಂದರೇ ಕೂಡಲೇ ನನಗೆ ಮಾಹಿತಿ ನೀಡಬೇಕು. ಗುಣಮಟ್ಟದ ಕಾಮಗಾರಿ ನಿರ್ವಹಿಸದೇ ಇದ್ದರೇ ಕಾಮಗಾರಿಯ ಬಿಲ್ ಮಾಡಲು ಬಿಡುವುದಿಲ್ಲ. ಜನರೂ ಸಹ ಕಾಮಗಾರಿಯ ಗುಣಮಟ್ಟವನ್ನು ಆಗಿದ್ದಾಂಗೆ ಪರಿಶೀಲನೆ ಮಾಡುತ್ತಿರಬೇಕು.

MLA Subba Reddy performing Bhoomi Pooja for ₹5 crore bridge construction in Gudibande taluk, Chikkaballapur district - Local News

ಇನ್ನೂ ಗುಡಿಬಂಡೆ ಕೆರೆ ಕಟ್ಟೆಯ ಅಲ್ಲಲ್ಲಿ ರಸ್ತೆ ಕುಸಿದಿರುವ ಬಗ್ಗೆ ವರದಿಯಾಗಿತ್ತು. ಈಗಾಗಲೇ ಈ ಕುರಿತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೂ ತಿಳಿಸಿದ್ದು, ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಒಂದು ವಾರದಲ್ಲಿ ಅನುದಾನ ಬಿಡುಗಡೆಯಾಗುವ ಮಾಹಿತಿಯಿದ್ದು, ಈ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದರು.

Local News – ಕಾರ್ಯಕ್ರಮದಲ್ಲಿ ಹಾಜರಿದ್ದವರು

ಈ ಸಮಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಆದಿರೆಡ್ಡಿ, ಸಣ್ಣ ನೀರಾವರಿ ಇಲಾಖೆಯ ಸುನೀಲ್, ಮುಖಂಡರಾದ ಲಕ್ಷ್ಮೀನಾರಾಯಣ, ಆದಿನಾರಾಯಣಪ್ಪ, ಬಾಲಕೃಷ್ಣಾರೆಡ್ಡಿ, ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular