ಬಾಗೇಪಲ್ಲಿ: ಟಿಪ್ಪರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಗೂಳೂರು ಗ್ರಾಮದ ಹೊರವಲಯದ ಪೆಟ್ರೋಲ್ ಬಂಕ್ ನಡೆದಿರುತ್ತೆ.
ತಾಲೂಕಿನ ಗೂಳೂರು ಗ್ರಾ.ಪಂ ವ್ಯಾಪ್ತಿಯ ಕೊತ್ತೂರು ಗ್ರಾಮದ ಸುನಿಲ್(38) ಮೃತಪಟ್ಟಿರುವ ರ್ದುದೈವಿ ಎಂದು ಗುರ್ತಿಸಲಾಗಿದೆ. ಮೃತ ವ್ಯಕ್ತಿ ಗೂಳೂರು ಕಡೆಯಿಂದ ತಮ್ಮ ಸ್ವಗ್ರಾಮಕ್ಕೆ ತಡರಾತ್ರಿಯಲ್ಲಿ ತಮ್ಮ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಗೂಳೂರು ಗ್ರಾಮದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವ ಕಾಂಗ್ರೆಸ್ ಮುಖಂಡನಾಗಿರುವ ಸುನಿಲ್ ಕುಮಾರ್ ನಿಧನಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಾ.ಪಂ ಮಾಜಿ ಅಧ್ಯಕ್ಷ ಗೂಳೂರು ರಮೇಶ್ ಬಾಬು ರವರು ಸಂತಾಪ ಸೂಚಿಸಿದ್ದಾರೆ.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
