Wayanad Landslide : ವಯನಾಡು ಜನರ ನೆರವಿಗೆ ನಿಂತ ಸಿದ್ದರಾಮಯ್ಯ, ವಯನಾಡಿನಲ್ಲಿ ನೂರು ಮನೆ ನಿರ್ಮಾಣದ ಘೋಷಣೆ…!

ಕಳೆದೆರಡು ದಿನಗಳ ಹಿಂದೆಯಷ್ಟೆ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ (Wayanad Landslide) ಅಪಾರ ಸಂಖ್ಯೆಯಲ್ಲಿ ಸಾವು ನೋವುಗಳು ಕಂಡಿದೆ. ಇಲ್ಲಿಯವರೆಗೆ 333 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಐದನೇ ದಿನವೂ ಭರದಿಂದ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಇದೀಗ ಕರ್ನಾಟಕ ಸರ್ಕಾರ ವಯನಾಡು (Wayanad Landslide) ನಲ್ಲಿ ಕರ್ನಾಟಕ ಸರ್ಕಾರದಿಂದ 100 ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

kerala flood 2

ಕೇರಳ ರಾಜ್ಯದ ವಯನಾಡಿನಲ್ಲಿ (Wayanad Landslide)  ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ, ನೂರಾರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಐದನೇ ದಿನವೂ ಸಹ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಶವಗಳಿಗಾಗಿ ಶೋಧ ಕಾರ್ಯ ಸಹ ನಡೆಯುತ್ತಿದೆ. (Wayanad Landslide) ಮಾಹಿತಿಯ ಪ್ರಕಾರ ಸುಮಾರು ಆರು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ಈ (Wayanad Landslide) ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ. ಜೊತೆಗೆ ಎನ್.ಡಿ.ಆರ್‍.ಎಫ್, ಸೇನೆ, ಎಸ್.ಡಿ.ಆರ್‍.ಎಫ್, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ತಂಡ ಮೊಕ್ಕಾಂಡ ಹೂಡಿದೆ.

Siddaramaiah annouced 100 homes in kerala 0

ಇನ್ನೂ ದುರಂತದ (Wayanad Landslide)  ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದಂತಹ ಜನರಿಗೆ ನೆರವು ನೀಡುವ ಕೆಲಸಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ವಯಾನಾಡಿನಲ್ಲಿ ಕರ್ನಾಟಕ ಸರ್ಕಾರದಿಂದ ನೂರು ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. (Wayanad Landslide) ವಯನಾಡಿನಲ್ಲಿ ನಡೆದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಹಾಗೂ ಕೇರಳ ಸರ್ಕಾರದೊಂದಿಗೆ ಕರ್ನಾಟಕ ಒಗ್ಗಟ್ಟಿನಿಂದ ನಿಂತಿದೆ. (Wayanad Landslide) ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ (Wayanad Landslide) ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. (Wayanad Landslide) ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *

Scroll to Top