HomeStateKarkala News : ಕಾರ್ಕಳದ ಹಿಂದೂ ಯುವತಿ ಗೆ ಮತ್ತು ಬೆರೆಸುವ ಔಷಧ ಕುಡಿಸಿ ಮುಸ್ಲಿಂ...

Karkala News : ಕಾರ್ಕಳದ ಹಿಂದೂ ಯುವತಿ ಗೆ ಮತ್ತು ಬೆರೆಸುವ ಔಷಧ ಕುಡಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರ …!

Karkala News – ನಮ್ಮ ದೇಶದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಠಿಣ ಶಿಕ್ಷೆಯಿದ್ದರೂ ಸಹ ಅಂತಹ ಕೃತ್ಯಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಅಥವಾ ಗುಂಡಿಕ್ಕಿ ಕೊಲೆ ಮಾಡುವಂತಹ ಶಿಕ್ಷೆ ನೀಡಬೇಕೆಂಬ ಆಗ್ರಹ ಸಹ ಕೇಳಿಬರುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ ಕೋಲ್ಕತ್ತಾದ ವೈದ್ಯೆಯ ಮೇಲೆ ನಡೆದ (Rape News)ಸಾಮೂಹಿಕ ಅತ್ಯಾಚಾರ ದೇಶದಾದ್ಯಂತ ಭಾರಿ ಆಕ್ರೋಷಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕದ ಉಡುಪಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ಕೇಳಿಬರುತ್ತಿದೆ. ಹಿಂದೂ ಯುವತಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಸ್ಥಳಕ್ಕೆ ಕರೆದುಕೊಂಡು (Karkala News) ಹೋಗಿ ಅನ್ಯಕೋಮಿನ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Karkala hindu girl rape 0

ಉಡುಪಿಯ ಕಾರ್ಕಳದಲ್ಲಿ ಈ ಘಟನೆ ನಡೆದಿದ್ದು, (Karkala News)ಸಂತ್ರಸ್ತ ಯುವತಿಯ ಹೇಳಿಕೆಯನ್ನು ಆಧರಿಸಿ ಅಲ್ತಾಫ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಲ್ತಾಫ್ ಸಂತ್ರಸ್ತ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡಿದ್ದಾನೆ. ಇಬ್ಬರ ನಡುವೆ ಸಲುಗೆ ಬೆಳೆಸಿಕೊಂಡು ಸಂತ್ರಸ್ತೆಯನ್ನು (Karkala News)ಭೇಟಿಯಾಗುವಂತೆ ಕೇಳಿದ್ದಾನೆ. ಅದರಂತೆ ಆಕೆಯನ್ನು ಪುಸಲಾಯಿಸಿ ಶುಕ್ರವಾರ ಮದ್ಯಾಹ್ನ ಕರೆಸಿಕೊಂಡಿದ್ದಾನೆ. ಬಳಿಕ ತನ್ನ ಇಬ್ಬರು ಸ್ನೇಹಿತರನ್ನು (Karkala News)ಅಲ್ಲಿಗೆ ಕರೆಸಿಕೊಂಡಿದ್ದಾನೆ. ಯುವತಿಗೆ ತಿಳಿಯುದಂತೆ ಬಿಯರ್‍ ಬಾಟಲಿ ತರೆಸಿಕೊಂಡಿದ್ದು, ಅದರಲ್ಲಿ ಮಾದಕ ವಸ್ತು ಪದಾರ್ಥ ಬೆರೆಸಿ, ಯುವತಿಗೆ ಮತ್ತು ಬರುವಂತೆ ಮಾಡಿ ಆರೋಪಿ ಹಾಗೂ ಆತನ ಸ್ನೇಹಿರಿಬ್ಬರು (Karkala News) ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನೂ ಅತ್ಯಾಚಾರ ನಡೆಸಿದ ಬಳಿಕ ನಿತ್ರಾಣಗೊಂಡಿದ್ದ ಯುವತಿಯನ್ನು (Karkala News) ಮನೆ ಸಮೀಪದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿದ್ದಾರೆ. ಇದು ಸಾಮೂಹಿಕ ಅತ್ಯಚಾರವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ (Karkala News)ಹಿಂದೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪೋಷಕರ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಅತ್ಯಚಾರ ಪ್ರಕರಣದಡಿ ಓರ್ವನನ್ನು ಬಂಧನ ಮಾಡಿದ್ದಾರೆ. ಈ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್‍ ಮಾತನಾಡಿ, (Karkala News)ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ. ಆರೋಪಿ ಮೂರು ತಿಂಗಳಿಂದ ಇನ್ಸ್ಟ್ರಾಗ್ರಾಂ ಮೂಲಕ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದ. ಶುಕ್ರವಾರ ಆರೋಪಿ ಅಲ್ತಾಫ್ ಕರೆ (Karkala News)ಮಾಡಿ ಸಂತ್ರಸ್ತೆಯನ್ನು ಬರಲು ಹೇಳಿದ್ದಾನೆ. (Karkala News) ಆಕೆಯನ್ನು ಅಲ್ಲಿಂದ ಅಪಹರಿಸಿ ಮದ್ಯದಲ್ಲಿ ಏನೋ ಬೆರಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ. ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಆರೋಪಿ ಅಲ್ತಾಫ್ ನನ್ನು ಬಂಧಿಸಸಲಾಗಿದೆ. ಬಿಯರ್‍ ತಂದುಕೊಟ್ಟಿದ್ದ (Karkala News) ಅಲ್ತಾಫ್ ಸ್ನೇಹಿತ ಸುಬೇರ್‍ ಎಂಬಾತನನ್ನು ಸಹ ಬಂಧಿಸಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ವಾಹನ ಜಪ್ತಿ ಮಾಡಲಾಗಿದೆ. ಸದ್ಯ ಸಂತ್ರಸ್ತೆಯನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. (Karkala News)ಈ ಪ್ರಕರಣದ ಸಂಬಂಧ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Karkala hindu girl rape 1

ಇನ್ನೂ ಈ ಪ್ರಕರಣದ ಕುರಿತು ಶಾಸಕ ಸುನೀಲ್ ಕುಮಾರ್‍ (Karkala News) ಪ್ರತಿಕ್ರಿಯೆ ನೀಡಿದ್ದು, ಇದೊಂದು ಪೂರ್ವಯೋಜಿತ ಕೃತ್ಯವಾಗಿದೆ. ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಬಿಯರ್‍ ನಲ್ಲಿ ಅಮಲು ಬರುವ ವಸ್ತು ಬೆರೆಸಿ ಆಕೆಗೆ ಕುಡಿಸಿ ಅತ್ಯಾಚಾರ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಮಾದರಿಯ ಪ್ರಕರಣವಾಗಿದೆ. (Karkala News)ಯುವತಿಯರು ಇಂತಜ ಘಟನೆಗಳಿಂದ ಪಾಠ ಕಲಿಯಬೇಕು ಜೊತೆಗೆ ಎಚ್ಚರಿಕೆಯಿಂದ ಇರಬೇಕು. ಇಂತಹ ಕೃತ್ಯಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular