ಪೆರೇಸಂದ್ರ ಪ್ರಕೃತಿ ಪದವಿ ಪೂರ್ವ ಕಾಲೇಜು ವತಿಯಿಂದ ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಗ್ರಾಮದಲ್ಲಿ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (NSS Camp) ವಾರ್ಷಿಕ ವಿಶೇಷ 7 ದಿನಗಳ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶಿಬಿರದಲ್ಲಿ (NSS Camp) ವರ್ಲಕೊಂಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಎಲ್.ಎ. ಬಾಬು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಹವ್ಯಾಸಗಳನ್ನು ಮತ್ತು ಉತ್ತಮ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕಾದರೆ ಈ ಎನ್ ಎಸ್ ಎಸ್ (NSS Camp) ಶಿಬಿರವು ಉತ್ತಮವಾದ ದಾರಿದ್ವೀಪವಾಗಿದೆ. ಅದನ್ನು ಉಪಯೋಗಿಸಿಕೊಂಡು ಭಾರತದ ಉತ್ತಮ ಪ್ರಜೆಗಳಾಗಿ ರೂಪಿಸಿಕೊಳ್ಳಿ ಎಂದು ತಿಳಿಸಿದರು.
ನಂತರ ಸೂರ್ಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಿವಣ್ಣರವರು ಮಾತನಾಡಿ ಜೀವನದಲ್ಲಿ ಏನಾದರೂ ಕಲಿಯಬೇಕಾದರೆ ಈ ಶಿಬಿರವು (NSS Camp) ಉತ್ತಮವಾದ ವೇದಿಕೆಯನ್ನು ಕಲ್ಪಿಸಿಕೊಂಡುತ್ತದೆ. ನಿಮ್ಮ ಜೀವನದ ಉದ್ದಕ್ಕೂ ನಿಮ್ಮನ್ನು ಅತ್ಯಂತ ಗೌರವ ಘನತೆಗಳನ್ನು ರೂಪಿಸಿಕೋಳ್ಳುತ್ತದೆ ಎಂದು ತಿಳಿಸಿದರು.

ಈ ವೇಳೆ (NSS Camp) ಎನ್.ಎಸ್.ಎಸ್ ವಿದ್ಯಾರ್ಥಿಗಳು ವರ್ಲಕೊಂಡ ಗ್ರಾಮದ ವಿವಿಧ ಬ್ಲಾಕ್ ಗಳಲ್ಲಿ ಸ್ವಚ್ಚತೆ ಮಾಡಿದರು. ಈ ಕಾರ್ಯಕ್ರಮದಲ್ಲಿ (NSS Camp) ಗ್ರಾಮ ಪಂಚಾಯಿತಿಯ ಅಧ್ಯಕ್ಷ ಭೀಮಪ್ಪ, ರಾಮಾಂಜಿ, ಪ್ರಕೃತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ವೈ ಮುನಿಕೃಷ್ಣಪ್ಪ. ಆಡಳಿತಾದಿಕಾರಿ ಡಾ.ಶ್ರೀನಿವಾಸ್ ಹಾಗೂ ಕಾಲೇಜಿನ ಸಿಬ್ಬಂದಿ, ಎಲ್ಲಾ ಎನ್ ಎಸ್ ಎಸ್ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
