Waqf Board : ವಕ್ಫ್ ಗೆ ಸೇರಿದ ಆಸ್ತಿಯನ್ನು ನಾವು ದಾಖಲಾತಿ ಮಾಡಿಕೊಂಡರೇ ಏನು ಎಂದ ಸಚಿವ ಜಮೀರ್ ಅಹ್ಮದ್….!

Waqf Board – ಸದ್ಯ ದೇಶದಲ್ಲಿ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ಕರ್ನಾಟಕದ ವಿಜಯಪುರ ವ್ಯಾಪ್ತಿಯ ರೈತರ ಜಮೀನಿಗೆ ವಕ್ಫ್ ಬೋರ್ಡ್ (Waqf Board) ನಿಂದ ನೀಡಿರುವ ನೊಟೀಸ್ ಕುರಿತು ಸಚಿವ ಜಮೀರ್‍ ಅಹಮದ್ ರಿಯಾಕ್ಟ್ ಆಗಿದ್ದಾರೆ. ಈ ನೊಟೀಸ್ ಅನ್ನು ಸಮರ್ಥನೆ ಮಾಡಿಕೊಂಡಿರುವ ಅವರು, ನಾವು ರೈತರ ಜಮೀನು ಒಂದು ಇಂಚು ಪಡೆದಿಲ್ಲ. ವಕ್ಫ್ ಗೆ ಸೇರಿದ ಆಸ್ತಿಯನ್ನು ನಾವು ದಾಖಲಾತಿ (Waqf Board ) ಮಾಡಿಕೊಂಡರೇ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ಸಂಬಂಧ ಮಾತನಾಡಿದ ಸಚಿವ ಜಮೀರ್‍ ಅಹ್ಮದ್ ವಿಜಯಪುರದಲ್ಲಿ ನಾವು ವಕ್ಫ್ ಆದಾಲತ್ ಮಾಡುತ್ತಿದ್ದೇವು. ಈ ಸಭೆಗೆ ಶಾಸಕ ಯತ್ನಾಳ್ ರವರನ್ನು ಸಹ ಕರೆದಿದ್ದೆವು. ಆದರೆ ಅವರು ಸಭೆಗೆ ಬರದೇ ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ರೈತರ ಒಂದು ಇಂಚು ಆಸ್ತಿ ಪಡೆದಿಲ್ಲ. ರೈತರ ಆಸ್ತಿ ಆಗಿದ್ರೆ ಅದನ್ನ ವಾಪಸ್ ಕೊಡ್ತೀವಿ. ಸುಮ್ಮನೆ ಆರೋಪ ಮಾಡ್ತಿದ್ದಾರೆ. ವಕ್ಫ್ ಆಸ್ತಿ ದಾಖಲಾತಿ ಮಾಡ್ತಿದ್ದೇವೆ. ಅದರಲ್ಲಿ ರೈತರ ಜಾಗ ಯಾವುದೂ ಇಲ್ಲ. ಇವರು ಸುಮ್ಮನೆ ಕ್ರಿಯೇಟ್ ಮಾಡಿಕೊಂಡಿದ್ದಾರೆ. ರೈತರ ಆಸ್ತಿ ಯಾರು ಮುಟ್ಟೋಕೆ ಆಗುವುದಿಲ್ಲ ಎಂದು ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿದ ನೊಟೀಸ್ ಸಮರ್ಥನೆ ಮಾಡಿಕೊಂಡರು.

ಇನ್ನೂ ಶಾಸಕ ಯತ್ನಾಳ್ ರವರಿಗೂ ಈ ಸಭೆಗೆ ಆಹ್ವಾನ ನೀಡಿದ್ದೆವು. ಆದರೆ ಅವರು ಬರಲಿಲ್ಲ. ಮೂರು ದಿನಗಳು ಕಳೆದ ಬಳಿಕ ಆರೋಪ ಮಾಡುತ್ತಿದ್ದಾರೆ. ವಕ್ಫ್ ಆಸ್ತಿಯನ್ನು ನಾವು ದಾಖಲಾತಿ ಮಾಡಿಕೊಂಡರೇ ತಪ್ಪೇನು, ನಾವು ರೈತರಿಗೆ ಸೇರಿದ ಆಸ್ತಿಯನ್ನು ಒಂದು ಇಂಚು ಪಡೆದುಕೊಂಡಿಲ್ಲ. ವಕ್ಫ್ ಆಸ್ತಿ ಖಾತಾ ಮಾಡಿದ್ದೇವೆ. ಬೇರೆಯವರಿಗೆ ಸೇರಿದ ಜಾಗವನ್ನು ನಾವು ಹೇಗೆ ಪಡೆಯಲು ಸಾಧ್ಯ. ಶಾಸಕ ಯತ್ನಾಳ್ ರವರು ಸಭೆಗೆ ಬಂದು ವಿರೋಧ ಮಾಡಬೇಕಾಗಿತ್ತು. ಆದರೆ ಸಭೆಗೆ ಬರಲಿಲ್ಲ ಏಕೆ ಎಂದು ಪ್ರಶ್ನೆ ಮಾಡಿದರು.

tejaswi surya reaction about Waqf property

ಇನ್ನೂ ವಿಜಯಪುರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಮತಕ್ಷೇತ್ರದ ಹೊನವಾಡ ಗ್ರಾಮದ ರೈತರ ಜಮೀನು ತನ್ನದೆಂದು ವಕ್ಫ್ ಬೋರ್ಡ್ ನೋಟಿಸ್ ನೀಡಿತ್ತು. ಈ ಸಂಬಂಧ ರೈತರು ವಕ್ಫ್ ಕಾಯ್ದೆ ಕುರಿತ ಸಂಸದೀಯ ಜಂಟಿ ಸದನ ಸಮಿತಿ ಸದಸ್ಯರು ಆಗಿರುವ ಸಂಸದ ತೇಜಸ್ವೀ ಸೂರ್ಯರನ್ನು ಭೇಟಿ ಮಾಡಿದ್ದರು. ಈ ಕುರಿತು ಮಾತನಾಡಿದ ಅವರು, ತರಾತುರಿಯಲ್ಲಿ ವಕ್ಫ್ ಬೋರ್ಡ್ ನಿಂದ ನೀಡಿದ ನೊಟೀಸ್ ನಿಂದ ರಾಜ್ಯದ ಸಾವಿರಾರು ರೈತರು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಅವರ ಆಂತಕವನ್ನು ಶೀಘ್ರವೇ ದೂರ ಮಾಡಿ ನ್ಯಾಯ ನೀಡುವ ಕೆಲಸ ಮಾಡಲಾಗುತ್ತದೆ. ವಕ್ಫ್ ತಿದ್ದುಪಡಿ ಬಿಲ್ ಜಾರಿಯಾಗುವುದಕ್ಕೂ ಮುನ್ನಾ ಸಾಧ್ಯವಾದಷ್ಟು ಜಾಗವನ್ನು ವಕ್ಫ್ ಹೆಸರಿಗೆ ನೊಂದಣಿ ಮಾಡಿಕೊಡುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿರುವುದು ದೊಡ್ಡ ಅಪರಾದ ಎಂದು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? Roph – Creative Ajax Portfolio WordPress Theme WPJobus – Job Board and Resumes WordPress Theme OGGI – Fashion Store WooCommerce Theme Firwl – Cyber Security WordPress Theme Pricepep – WooCommerce Dynamic Pricing, Discounts & Fees Oconnor – Lawyer & Law Firm WordPress Theme Yoge – Fitness and Yoga WordPress Theme Ukko – Personal Portfolio WordPress Theme Chiropracto – Physical Therapy WordPress Theme Advanced CF7 DB – Reply Back