Monday, June 30, 2025
HomeStateSiddaramaiah: ಹಾಸನಾಂಬೆ ದರ್ಶನ ಪಡೆದ ಸಿಎಂ, ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಅರ್ಚನೆ ಮಾಡಿಸಿದ ಸಿದ್ದರಾಮಯ್ಯ….!

Siddaramaiah: ಹಾಸನಾಂಬೆ ದರ್ಶನ ಪಡೆದ ಸಿಎಂ, ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಅರ್ಚನೆ ಮಾಡಿಸಿದ ಸಿದ್ದರಾಮಯ್ಯ….!

Siddaramaiah – ಹಾಸನದ ಪ್ರಸಿದ್ಧ ಹಾಸನಾಂಬ ದೇಗುಲಕ್ಕೆ ಸೋಮವಾರ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಖಡ್ಗಮಾಲಾ ಸ್ತೋತ್ರದ ಮೂಲಕ ಅರ್ಚನೆ ಮಾಡಿಸಿದ್ದಾರೆ. ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ಹಲವು ವಿಚಾರಗಳಲ್ಲಿ ಸಂಕಷ್ಟ ಎದುರಿಸುತ್ತಿರುವ (Siddaramaiah) ಸಿಎಂ ಸಿದ್ದರಾಮಯ್ಯ ಹಾಸನಾಂಬೆಯ ದರ್ಶನ ಪಡೆದು, ಖಡ್ಗಮಾಲಾ ಸ್ತ್ರೋತ್ರದ ಮೂಲಕ ಅರ್ಚನೆ ಮಾಡಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

CM Siddaramaiah special pooja in Hassanamba temple

ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಹಾಸನಾಂಬೆ ದೇವಿ ದರ್ಶನಕ್ಕೆ ತೆರಳಿದ್ದರು. ಸಾಮಾನ್ಯವಾಗಿ ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಆದರೆ, ಈ ಬಾರಿ ಸಿದ್ದರಾಮಯ್ಯ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. (Siddaramaiah) ಮುಡಾ, ವಾಲ್ಮೀಕಿ ಸೇರಿದಂತೆ ಹಲವು ವಿಚಾರಗಳಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಇತ್ತಿಚಿಗೆ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

CM Siddaramaiah special pooja in Hassanamba temple 2

ಅಷ್ಟಕ್ಕೂ ಖಡ್ಗಮಾಲಾ ಸ್ತ್ರೋತ್ರ ಎಂದರೇನು ಎಂಬ ವಿಚಾರಕ್ಕೆ ಬಂದರೇ, (Siddaramaiah) ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರ ಎನ್ನಲಾಗಿದೆ. ಖಡ್ಗಮಾಲಾ ಸ್ತೋತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ. ಜೊತೆಗೆ ಎಲ್ಲಾ ರೀತಿಯ (Siddaramaiah) ಸಮಸ್ಯೆಗಳಿಂದ ಇದು ಮುಕ್ತಿ ನೀಡುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿ ಇದೆ. ಮುಡಾ ಹಗರಣ ಸೇರಿದಂತೆ ಅನೇಕ ವಿಚಾರಗಳಲ್ಲಿ ತೊಂದರೆ ಎದುರಿಸುತ್ತಿರುವ (Siddaramaiah) ಮುಖ್ಯಮಂತ್ರಿಗಳು, ಸಮಸ್ಯೆಯಿಂದ ಪಾರಾಗಲು ಖಡ್ಗಮಾಲಾ ಸ್ತೋತ್ರದ ಮೂಲಕ ಅರ್ಚನೆ ಮಾಡಿಸಿದ್ದಾರೆ ಎನ್ನಲಾಗಿದೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular