0.9 C
New York
Sunday, February 16, 2025

Buy now

Students Protest: ವಿದ್ಯಾರ್ಥಿ ನಿಲಯಗಳಲ್ಲಿನ ಅವ್ಯವಹಾರ ತನಿಖೆ ನಡೆಸಲು ಆಗ್ರಹ….!

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಡೆಯುತ್ತಿರುವ ವ್ಯಾಪಕ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಮತ್ತು ಹಾಸ್ಟಲ್ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಸ್.ಎಫ್.ಐ ಕಾರ್ಯಕರ್ತರು (Students Protest) ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಾಗೇಪಲ್ಲಿಯ ಡಾ.ಎಚ್.ಎನ್.ವೃತ್ತದಿಂದ (Students Protest)  ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆಯಲ್ಲಿ ಬಂದ ಎಸ್‍ಎಫ್‍ಐ ನ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು ನಂತರ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ (Students Protest) ಎಸ್.ಎಫ್.ಐ ರಾಜ್ಯಾಧ್ಯಕ್ಷ ಎನ್.ಶಿವಪ್ಪ ಅಂಬ್ಲಿಕಲ್ ಮಾತನಾಡಿ, ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‍ಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ.  ವಿದ್ಯಾರ್ಥಿಗಳಿಗೆ  ಗುಣಮಟ್ಟದ ಊಟ ನೀಡುತ್ತಿಲ್ಲ, ಮೆನು ಪ್ರಕಾರ ಊಟ ನೀಡುತ್ತಿಲ್ಲ,  ಹೊಸ ಮೆನು ಇದ್ದರೂ ಸಹ ಹಳೇ ಮೆನು ಪ್ರಕಾರವೇ ಊಟನ ನೀಡಲಾಗುತ್ತಿದೆ, ಹಾಸ್ಟಲ್‍ನಲ್ಲಿರುವ ಬಡ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಇಲಾಖೆಯ ಹಿರಿಯ ಅಧಿಕಾರಿಗಳು ಕಣ್ಣು-ಮುಚ್ಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಯ ದೃಷ್ಠಿಯಿಂದ ಸರ್ಕಾರ (Students Protest)  ನೀಡುತ್ತಿರುವ ಅನೇಕ ಸೌಲಭ್ಯಗಳನ್ನು ಹಾಗೂ  ಪ್ರತಿನಿತ್ಯ  ವಿದ್ಯಾರ್ಥಿಗಳು ಹಾಸ್ಟೆಲುಗಳಲ್ಲಿ ವಾಸ್ತವ್ಯವಿಲ್ಲದಿದ್ದರೂ ಅವರು ಇದ್ದಂತೆ ನಕಲಿ ಬಯೋಮೆಟ್ರಿಕ್ ಮೂಲಕ ವಿದ್ಯಾರ್ಥಿಗಳಿಗೆ ವಂಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಸಿಬೇಕಾಗಿರುವ ಸೌಲಭ್ಯಗಳನ್ನು ಇಲಾಖೆಯ ಹಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

SFI Protest

ಎಸ್.ಎಫ್.ಐ (Students Protest)  ಜಿಲ್ಲಾಧ್ಯಕ್ಷ ಎ.ಸೋಮಶೇಖರ ಮಾತನಾಡಿ, ಹಾಸ್ಟೆಲ್ ಮೇಲ್ವಿಚಾರಕರು ಅತಿಥಿಗಳಂತೆ ಅಪರೂಪಕ್ಕೆ ಬೇಟಿ ನೀಡುತ್ತಾರೆ, ಅಡುಗೆ ಸಿಬ್ಬಂದಿಯದ್ದೇ ಕಾರು-ಬಾರು ಆಗಿದೆ. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೌಲಭ್ಯಗಳನ್ನು ಲೂಟಿ ಮಾಡುತ್ತಿದ್ದು ಇಂದು ಕೇವಲ ಸಾಂಕೇತಿಕವಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಕ್ಷಣ ತನಿಖೆ ನಡೆಸಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿದ್ಯಾರ್ಥಿಗಳು ನ್ಯಾಯ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಸ್ ಎಫ್‍ಐ ವತಿಯಿಂದ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಂತರ ಪ್ರತಿಭಟನಕಾರರು(Students Protest) ತಹಶೀಲ್ದಾರ್ ಮನಿಷಾ ಎನ್.ಪತ್ರಿ ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ ಎಫ್‍ಐ ಜಿಲ್ಲಾ ಮುಖಂಡ ಸೋಮಶೇಖರ ಸೇರಿದಂತೆ ಕಾರ್ಯಕರ್ತರು ಇದ್ದರು.

by Admin
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe

Latest Articles