Bengaluru – ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ಕಲಹದ ನೋವಿನಿಂದ ಇಹಲೋಕ ತ್ಯೆಜಿಸಿದ ಟೆಕ್ಕಿ….!

Bengaluru – ಸಿಲಿಕಾನ್ ಸಿಟಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಘಟನೆ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ವರ್ಷದ ಪ್ರಶಾಂತ್ ನಾಯರ್ ಎಂಬ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಕೌಟುಂಬಿಕ ಕಲಹದಿಂದ ತೀವ್ರವಾಗಿ ಮನನೊಂದಿದ್ದ ಕಾರಣಕ್ಕೆ ಪ್ರಶಾಂತ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Tech professional Prashanth Nair, who died by suicide in Bengaluru

Bengaluru – ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ದ ದಂಪತಿ

Bengaluru – ಪ್ರಶಾಂತ್ ನಾಯರ್ ಮತ್ತು ಅವರ ಪತ್ನಿ ಪೂಜಾ ನಾಯರ್ ಕಳೆದ 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ 8 ವರ್ಷದ ಮಗಳೊಬ್ಬಳಿದ್ದಾಳೆ. ಆದರೆ, ಕೌಟುಂಬಿಕ ಭಿನ್ನಾಭಿಪ್ರಾಯಗಳಿಂದಾಗಿ ಒಂದು ವರ್ಷದ ಹಿಂದೆ ಇವರು ಪರಸ್ಪರ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪೂಜಾ ನಾಯರ್ ಕೂಡ ಒಂದು ಬಹುರಾಷ್ಟ್ರೀಯ ಕಂಪನಿಯಲ್ಲಿ ಹಿರಿಯ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಈ ಘಟನೆಯಲ್ಲಿ ಪತ್ನಿಯಿಂದ ಯಾವುದೇ ಕಿರುಕುಳದ ಆರೋಪಗಳು ಕೇಳಿಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Bengaluru – ಘಟನೆಯ ಹಿನ್ನೆಲೆ

Bengaluru – ಪ್ರಶಾಂತ್ ಅವರ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ, ತಮ್ಮ ಮಗ ಮತ್ತು ಸೊಸೆ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ. ಶುಕ್ರವಾರ ಪ್ರಶಾಂತ್ ಮತ್ತು ಅವರ ಪತ್ನಿ ನಡುವೆ ಜಗಳವಾಗಿತ್ತು. ಇದಾದ ಬಳಿಕ, ಅವರ ತಂದೆ ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರಶಾಂತ್ ಉತ್ತರಿಸಿರಲಿಲ್ಲ. ಆತಂಕಗೊಂಡ ತಂದೆ ಮಗನ ಮನೆಗೆ ತೆರಳಿದಾಗ, ಪ್ರಶಾಂತ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಕಂಡುಬಂದಿದೆ. “ಕೌಟುಂಬಿಕ ನೆಮ್ಮದಿ ಇಲ್ಲದೇ ಖಿನ್ನತೆಗೆ ಒಳಗಾಗಿದ್ದ” ಎಂದು ಅವರ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

Read this also : ಕಾಪಾಡಿ, ಕಾಪಾಡಿ ಎಂದ ಪತಿ, ಪತ್ನಿಯ ಕಿರುಕುಳ ತಾಳಲಾರದೆ ಸಹಾಯಕ್ಕಾಗಿ ಕಿರುಚಾಡಿದ ಪತಿ, ವೈರಲ್ ಆದ ವಿಡಿಯೋ…!

Bengaluru – ಬೆಂಗಳೂರು ಉತ್ತರ ಡೆಪ್ಯೂಟಿ ಕಮೀಷನರ್ ಸಿದ್ದುಲು ಅದ್ವೈತ್ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, “ಪ್ರಶಾಂತ್ ಮತ್ತು ಅವರ ಪತ್ನಿ ಒಂದು ವರ್ಷದಿಂದ ದೂರವಾಗಿದ್ದರು. ಪತ್ನಿಯಿಂದ ಕಿರುಕುಳದ ಯಾವುದೇ ಆರೋಪಗಳಿಲ್ಲ. ಡೆತ್‌ನೋಟ್ ಕೂಡ ಸಿಕ್ಕಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

Leave a Comment

Your email address will not be published. Required fields are marked *

Scroll to Top