Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Robbery: ಕಣ್ಣಿಗೆ ಖಾರದ ಪುಡಿ ಎರಚಿ ₹50,000 ದೋಚಿದ ಕಳ್ಳ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ…!
    National

    Robbery: ಕಣ್ಣಿಗೆ ಖಾರದ ಪುಡಿ ಎರಚಿ ₹50,000 ದೋಚಿದ ಕಳ್ಳ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ…!

    By by AdminMay 2, 20251 Comment2 Mins Read
    Facebook Twitter Pinterest WhatsApp
    CCTV footage of thief throwing chilli powder at mobile shop owner in Bijnor robbery

    Table of Contents

    Toggle
    • Robbery – ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಂದ ದರೋಡೆ
      • Robbery – ಖಾರದ ಪುಡಿ ಎರಚಿ ಹಣ ದೋಚಿದ ದುಷ್ಕೃತ್ಯ

    Robbery – ಉತ್ತರ ಪ್ರದೇಶದ ಬಿಜ್ನೋರ್ ಪಟ್ಟಣದಲ್ಲಿ ನಡೆದ ಒಂದು ಅಮಾನವೀಯ ಘಟನೆಯಲ್ಲಿ, ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳನೊಬ್ಬ ಮಾಲೀಕರ ಕಣ್ಣಿಗೆ ಖಾರದ ಪುಡಿ ಎರಚಿ ₹50,000 ನಗದು ದೋಚಿ ಪರಾರಿಯಾಗಿದ್ದಾನೆ. ಕಳೆದೆರಡು ದಿನಗಳ ಹಿಂದೆಯಷ್ಟೆ ನಡೆದ ಈ ದರೋಡೆ ಕೃತ್ಯವು ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿದೆ. ಈ ಘಟನೆಯು ಬಿಜ್ನೋರ್‌ನಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ.

    CCTV footage of thief throwing chilli powder at mobile shop owner in Bijnor robbery

    Robbery – ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಂದ ದರೋಡೆ

    ವರದಿಗಳ ಪ್ರಕಾರ, ಬಿಜ್ನೋರ್‌ನ ಸುಹೈಲ್ ಎಂಬುವವರು ತಮ್ಮ ಮೊಬೈಲ್ ಅಂಗಡಿಯಲ್ಲಿ ಎಂದಿನಂತೆ ವ್ಯಾಪಾರದಲ್ಲಿ ತೊಡಗಿದ್ದರು. ಮಧ್ಯಾಹ್ನದ ಸಮಯದಲ್ಲಿ ಮುಖವಾಡ ಧರಿಸಿದ್ದ ವ್ಯಕ್ತಿಯೊಬ್ಬ ಗ್ರಾಹಕನಂತೆ ಅಂಗಡಿಗೆ ಬಂದಿದ್ದಾನೆ. ಮೊದಲು ಆತ ₹19ಕ್ಕೆ ಮೊಬೈಲ್ ರೀಚಾರ್ಜ್ ಮಾಡಿಸುವಂತೆ ಕೇಳಿಕೊಂಡಿದ್ದಾನೆ. ನಂತರ, ಕೆಲವೇ ನಿಮಿಷಗಳಲ್ಲಿ ಮತ್ತೆ ₹29ಕ್ಕೆ ರೀಚಾರ್ಜ್ ಮಾಡಬೇಕೆಂದು ತಿಳಿಸಿದ್ದಾನೆ. ಸುಹೈಲ್ ರೀಚಾರ್ಜ್ ಮಾಡುವಲ್ಲಿ ನಿರತರಾಗಿದ್ದಾಗ, ಆ ಕಳ್ಳ ತನ್ನ ಬಟ್ಟೆಯೊಳಗೆ ಬಚ್ಚಿಟ್ಟಿದ್ದ ಕೆಂಪು ಖಾರದ ಪುಡಿಯನ್ನು ತೆಗೆದು ಸುಹೈಲ್ ಅವರ ಕಣ್ಣಿಗೆ ಎರಚಿದ್ದಾನೆ.

    Robbery – ಖಾರದ ಪುಡಿ ಎರಚಿ ಹಣ ದೋಚಿದ ದುಷ್ಕೃತ್ಯ

    ಖಾರದ ಪುಡಿಯ ತೀವ್ರವಾದ ಉರಿ ಮತ್ತು ನೋವಿನಿಂದ ಸುಹೈಲ್ ಕಂಗಾಲಾದರು. ಈ ಗೊಂದಲದ ಲಾಭ ಪಡೆದ ಕಳ್ಳ, ಕ್ಷಣಾರ್ಧದಲ್ಲಿ ಅಂಗಡಿಯ ಕೌಂಟರ್‌ನಲ್ಲಿದ್ದ ಸುಮಾರು ₹50,000 ಹಣವನ್ನು ಕಸಿದುಕೊಂಡು ಓಡಿಹೋಗಿದ್ದಾನೆ. ಸುಹೈಲ್ ಹಣವನ್ನು ಕಸಿದುಕೊಳ್ಳುತ್ತಿದ್ದಂತೆ ಆತನನ್ನು ಹಿಡಿಯಲು ಪ್ರಯತ್ನಿಸಿದರೂ, ಕಳ್ಳ ಹಣದೊಂದಿಗೆ ಅಂಗಡಿಯಿಂದ ಹೊರಗೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾನೆ. ಕಣ್ಣಿನಲ್ಲಿ ಉರಿಯುತ್ತಿದ್ದರೂ ಸಹ ಸುಹೈಲ್ ಆತನನ್ನು ಹಿಂಬಾಲಿಸಲು ಪ್ರಯತ್ನಿಸಿದ್ದಾರೆ, ಆದರೆ ದೃಷ್ಟಿ ಮಂಜಾಗಿದ್ದರಿಂದ ಕಳ್ಳನನ್ನು ಹಿಡಿಯಲು ಸಾಧ್ಯವಾಗಲಿಲ್ಲ. Read this also : ಮಾಲೀಕನನ್ನೆ ಯಾಮಾರಿಸಿ 16 ಲಕ್ಷ ಚಿನ್ನಾಭರಣ ಕದ್ದ ಕಿಲಾಡಿ ಕಳ್ಳಿಯರು….!

    CCTV footage of thief throwing chilli powder at mobile shop owner in Bijnor robbery

    ವೈರಲ್ ವಿಡಿಯೋ ಇಲ್ಲಿದೆ ನೋಡಿ : Click here 
    Robbery – ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಪೊಲೀಸರಿಂದ ತನಿಖೆ

    ಸುಹೈಲ್ ಅವರ ಕೂಗಾಟ ಕೇಳಿ ಅಕ್ಕಪಕ್ಕದ ಅಂಗಡಿಯವರು ಮತ್ತು ಸಾರ್ವಜನಿಕರು ಸಹಾಯಕ್ಕೆ ಧಾವಿಸಿ ಬಂದಿದ್ದಾರೆ. ಕೂಡಲೇ ಅವರ ಕಣ್ಣುಗಳನ್ನು ತೊಳೆಯಲಾಗಿದ್ದು, ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳತನದ ಸಂಪೂರ್ಣ ದೃಶ್ಯ ಸೆರೆಯಾಗಿದ್ದು, ಪೊಲೀಸರಿಗೆ ಇದು ಪ್ರಮುಖ ಸಾಕ್ಷ್ಯವಾಗಿದೆ. ಸದ್ಯಕ್ಕೆ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳನನ್ನು ಗುರುತಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    Bijnor robbery 2025 Bijnor thief caught on camera CCTV captures robbery Chilli powder attack CCTV Masked thief robbery Mobile shop theft Bijnor Red chilli powder attack Shopkeeper attacked in Bijnor Thief escapes with cash Thief throws chilli powder UP crime news Uttar Pradesh crime news Viral CCTV robbery video
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Death : ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ದುರಂತ ಸಾವು: ಪೋಷಕರ ಅನುಮಾನ!

    May 18, 2025

    Jan Aushadhi Kendra – ಸರ್ಕಾರಿ ಆಸ್ಪತ್ರೆ ಆವರಣದ ಜನ ಔಷಧಿ ಕೇಂದ್ರಗಳು ಮುಚ್ಚಲಿವೆ: ಇಲ್ಲಿದೆ ಕಾರಣ…!

    May 18, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025

    1 Comment

    1. Pingback: Police - ಬಾಗೇಪಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮನೆ ಕಳ್ಳತನ ಮತ್ತು ಲಾರಿ ಕಳ್ಳತನ ಭೇದಿಸಿ ಪೊಲೀಸರಿಗೆ ಅಭಿನಂದನೆ

    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.