Tuesday, June 24, 2025
HomeStateCrime - ಆಂಧ್ರ ಬಸ್ ಪಲ್ಟಿ; 13ಕ್ಕೂ ಅಧಿಕ‌ ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Crime – ಆಂಧ್ರ ಬಸ್ ಪಲ್ಟಿ; 13ಕ್ಕೂ ಅಧಿಕ‌ ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು – ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚೆಂಡೂರು ಕ್ರಾಸ್ ಬಳಿ  ಚಾಲಕನ ನಿಯಂತ್ರಣ ತಪ್ಪಿ ಆಂದ್ರಪ್ರದೇಶದ ಬಸ್ ಪಲ್ಟಿಯಾದ ಪರಿಣಾಮ 13 ಅಧಿಕ‌ ಪ್ರಯಾಣಿಕರು ಗಾಯಗೊಂಡು ಇಬ್ಬರು ಗಂಭೀರವಾಗಿರುವ ಘಟನೆ ಭಾನುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ನಡೆದಿದೆ.
ಬೆಂಗಳೂರಿಂದ ಪುಟ್ಟಪರ್ತಿ ಕಡೆಗೆ ಪ್ಎಯಾಣಿಸುತ್ತಿದ್ದ ಆಂದ್ರಪ್ರದೇಶದ ಬಸ್ ಗುಡಿಬಂಡೆ ತಾಲ್ಲೂಕಿನ ಚೆಂಡೂರ್ ಕ್ರಾಸ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದು ಇದರಲ್ಲಿ  ಚಾಲಕ ಮತ್ತು ನಿರ್ವಾಹಕ ಸೇರಿದಂತೆ 13 ಜನರು ಗಾಯಕೊಂಡಿದ್ದಾರೆ. ಇಬ್ಬರು ಸ್ಥಿತಿ ಗಂಭೀರವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಆಸತ್ರೆ  ಗೆ ರವಾನಿಸಲಾಗಿದೆ. ಉಳಿದವರು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular