Congress Guarantees – ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳ ಯಶಸ್ವಿ ಆಡಳಿತ ಪೂರೈಸಿರುವುದಕ್ಕೆ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚುನಾವಣಾ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾಂಗ್ರೆಸ್ ‘ನುಡಿದಂತೆ ನಡೆದಿದೆ’ ಎಂದು ಅವರು ಬಣ್ಣಿಸಿದರು. ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಶಾಸಕರು ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ನಿಜಕ್ಕೂ ವರದಾನವಾಗಿವೆ ಎಂದರು.
Congress Guarantees – ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ
ಈ ಸಭೆಯಲ್ಲಿ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಸೌಲಭ್ಯಗಳು ಎಲ್ಲಾ ಅರ್ಹರಿಗೆ ತಲುಪುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಅಲ್ಲದೆ, ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ತಲುಪದಿರಲು ಕಾರಣಗಳನ್ನು ಪತ್ತೆ ಹಚ್ಚಿ, ಅದಕ್ಕೆ ಪರಿಹಾರ ಕಲ್ಪಿಸುವ ಮೂಲಕ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತು ನೀಡುವಂತೆ ತಿಳಿಸಿದರು.
Congress Guarantees – ಬಾಗೇಪಲ್ಲಿ ಕ್ಷೇತ್ರದಲ್ಲಿ 400 ಕೋಟಿ ರೂ. ಮೊತ್ತದ ಲಾಭ!
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿರುದ್ಯೋಗಿ ಯುವಕ-ಯುವತಿಯರು, ಕೂಲಿ ಕಾರ್ಮಿಕರು, ರೈತರು ಮತ್ತು ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಯೋಜನೆಗಳು ಪ್ರಪಂಚಕ್ಕೆ ಮಾದರಿ ಆಗಿದ್ದು, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಮೂಲಕ ಸುಮಾರು 400 ಕೋಟಿ ರೂ. ಹಣವನ್ನು ಕ್ಷೇತ್ರದ ಜನತೆ ಸೌಲಭ್ಯ ಪಡೆದಿದ್ದಾರೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸಂತಸ ವ್ಯಕ್ತಪಡಿಸಿದರು. ಇದು ಕ್ಷೇತ್ರದ ಬಡಜನತೆಗೆ ವರದಾನವಾಗಿದೆ ಎಂದು ಅವರು ಪುನರುಚ್ಚರಿಸಿದರು.
Congress Guarantees -ಸಮಿತಿ ಸದಸ್ಯರ ಪಾತ್ರ ಪ್ರಮುಖ: ಹೆಚ್.ಎಸ್. ನರೇಂದ್ರ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್. ನರೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಿದ್ದು ಕಾಂಗ್ರೆಸ್ ಸರ್ಕಾರದ ಹೆಗ್ಗಳಿಕೆ ಎಂದರು. ಈಗಾಗಲೇ ರಚನೆಯಾಗಿರುವ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರು ಪ್ರತಿಯೊಂದು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
Read this also : ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದಾಗ ಮಾತ್ರ ಪೋಷಕರ ಜೀವನ ಸಾರ್ಥಕ: ಎಸ್.ಎನ್.ಸುಬ್ಬಾರೆಡ್ಡಿ
Congress Guarantees – ಗೌರವ ಸನ್ಮಾನ ಮತ್ತು ಅಧಿಕಾರಿಗಳ ಉಪಸ್ಥಿತಿ
ಇದೇ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮನೀಶ್ ಎನ್ ಪತ್ರಿ, ತಾ.ಪಂ. ಇಒ ರಮೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸೋಮಶೇಖರ್, ಸುಬ್ಬರಾಮು, ಸಿ.ಆರ್. ರಮೇಶ್, ಸುಮಂಗಳಮ್ಮ, ಹುಬ್ಬಳಿ ಬಯ್ಯಪ್ಪ, ಮೂರ್ತಿ, ಶ್ರೀನಿವಾಸ್, ಡಿ.ಬಿ. ಆನಂದ್, ಮಂಜುನಾಥ, ಶ್ವೇತ, ಮಜಿಭ್, ಬಯ್ಯಾರೆಡ್ಡಿ, ರಾಘವೇಂದ್ರ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.