ಸಮಾಜದಲ್ಲಿ ಕೆಲವು ಪಾಪಿಗಳು ಕೊಲೆಗಳು, ಹಲ್ಲೆಗಳನ್ನು ಮಾಡುತ್ತಿರುತ್ತಾರೆ. ಇದೀಗ 12 ವರ್ಷದ ಬಾಲಕನೋರ್ವವನ್ನು ಬರ್ಬರವಾಗಿ ಹತ್ಯೆ ಮಾಡಿ (Crime News)ರೈಲ್ವೆ ಹಳ್ಳಿ ಪಕ್ಕದಲ್ಲಿ ಎಸೆದ ಘಟನೆ ನಡೆದಿದೆ. ಈ ಘಟನೆ ಹಾಸನದ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ ಎಂದು ತಿಳಿದುಬಂದಿದೆ.
12 ವರ್ಷದ ಬಾಲಕನೊರ್ವವನ್ನು ಬರ್ಬರವಾಗಿ ಕೊಲೆ ಮಾಡಿ ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುಶಾಲ್ ಗೌಡ (12). ಮೃತ ಬಾಲಕ ಕುಶಾಲ್ ಗೌಡ ಮೃತದೇಹ ರೈಲ್ವೆ ಹಳಿ ಬಳಿಯಿದ್ದ ಪೊದೆಯಲ್ಲಿ (Crime News) ಕಾಣಿಸಿಕೊಂಡಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ ರೂಪ ದಂಪತಿಯ ಪುತ್ರನೇ ಕುಶಾಲ್. ಈತ ಜು.9 ರ ಸಂಜೆ ಮಕ್ಕಳ ಜೊತೆಗೆ ಕಣ್ಣಾಮುಚ್ಚಾಲೆ ಆಡುತ್ತಿದ್ದ. ಆಟವಾಡಲು ಹೋದ ಬಾಲಕ ಮತ್ತೆ ಮನೆಗೆ ವಾಪಸ್ಸು ಬಂದಿರಲಿಲ್ಲವಂತೆ. ಮಗು ವಾಪಸ್ಸು ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡಾಕಿದ್ದಾರೆ.

ಇನ್ನೂ ಈ ಭಾಗದಲ್ಲಿ ಇತ್ತೀಚಿಗೆ ಚಿರತೆ ಕಾಟ ಸಹ ಹೆಚ್ಚಾಗಿತ್ತು. ಇದರಿಂದ ಚಿರತೆ ಬಾಲಕನನ್ನು ಎತ್ತಿಕೊಂಡು ಹೋಗಿರಬಹುದು ಎಂದು ಪೋಷಕರು ಅರಣ್ಯ ಇಲಾಖೆಯ ಸಿಬ್ಬಂದಿಯ ಜೊತೆಗೆ ಶೋಧ ನಡೆಸಿದ್ದರು. ಎಲ್ಲೂ ಸಹ ಬಾಲಕ ಪತ್ತೆಯಾಗಿರಲಿಲ್ಲ. ಆದರೆ ಜು.10 ಮಧ್ಯಾಹ್ನ ಪದೆಯೊಂದರಲ್ಲಿ ಕುಶಾಲ್ ಗೌಢ ಮೃತದೇಹ (Crime News) ಪತ್ತೆಯಾಗಿದೆ. ರೈಲು ಡಿಕ್ಕಿಯಾಗಿ ಬಾಲಕ ಸತ್ತಿದ್ದಾನೆಂದು ಬಿಂಬಿಸುವ ನಿಟ್ಟಿನಲ್ಲಿ ಶವ ಎಸೆಯಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
