Crime News: ಪ್ರೀತಿಸಿದ ವ್ಯಕ್ತಿಯನ್ನು ಮದುವೆಯಾಗಲು, ಹೆತ್ತ ಮಗುವನ್ನೆ ಕೊಂದ ಪಾಪಿ ತಾಯಿ….!

Crime News ಭೂಮಿಯ ಮೇಲೆ ದೇವರ ಸ್ಥಾನವನ್ನು ತಾಯಿಗೆ ಕೊಡಲಾಗುತ್ತದೆ. ಆದರೆ ಕೆಲವೊಂದು ಘಟನೆಗಳಲ್ಲಿ ತಾಯಿ ಎಂಬ ಪದಕ್ಕೆ ಕೆಲವರು ಕಳಂಕ ತರುತ್ತಿರುತ್ತಾರೆ. ಅಂತಹುದೇ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಪಾಪಿ ತಾಯಿಯೊಬ್ಬಳು ತಾನು ಪ್ರೀತಿಸಿದ ವ್ಯಕ್ತಿಯನ್ನು ಮದುವೆಯಾಗಲು ಅಡ್ಡಿಯಾಗಿದ್ದ ತನ್ನ 5 (Crime News) ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಅಷ್ಟಕ್ಕೂ ತಾಯಿಯೇ ಮಗಳನ್ನು ಕೊಲೆ ಮಾಡಲು ಕಾರಣವಾದರೂ ಏನು ಎಂಬ ವಿಚಾರಕ್ಕೆ ಬಂದರೇ,

ದೆಹಲಿಯ ಅಶೋಕ್ ವಿಹಾರ್‍ ಎಂಬಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಾಯಿಯೊಬ್ಬಳು ತನ್ನ ಐದು ವರ್ಷ ಮಗಳನ್ನು ಕೊಲೆ ಮಾಡಿದ್ದಾಳೆ. ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ಆಕೆ ಬಯಸಿದ್ದಳು. ಆದರೆ ಈ ಮದುವೆಗೆ ಆಕೆಯ ಮಗಳು ಅಡ್ಡಿಯಾಗಿದ್ದಳು. ಈ ಕಾರಣದಿಂದ ಆಕೆ ತನ್ನ ಮಗಳನ್ನು ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.  ಆರೋಪಿ ತಾಯಿ ಮಗುವನ್ನು ದೀಪ್ ಚಂದ್ ಬಂಧು ಎಂಬ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಳು. ಆದರೆ ಮಗು ಅದಾಗಲೇ ಮೃತಪಟ್ಟಿದೆ ಎಂದು ಆಸ್ಪತ್ರೆಯವರು ಹೇಳಿದ್ದರು. ಈ ಸಂಬಂಧ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು. ಈ ಕುರಿತು ವಿಚಾರಣೆ ನಡೆಸಿದಾಗ ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿತ್ತು.

Mother killed her daughter 0

ಬಳಿಕ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮಗುವಿನ ತಾಯಿ ಹಾಗೂ ಕೆಲ ಸಂಬಂಧಿಕರನ್ನು ವಿಚಾರಣೆ ನಡೆಸಲಾಗಿತ್ತು. ತಾಯಿಯನ್ನು ವಿಚಾರಣೆ ನಡೆಸುವಾಗ ತನ್ನ ಮಗಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಹಿಳೆಯ ಪತಿ ಆಕೆಯನ್ನು ತೊರೆದಿದ್ದನಂತೆ. ಬಳಿಕ ಮಹಿಳೆಗೆ ಇನ್ಸ್ಟಾಗ್ರಾಂನಲ್ಲಿ ರಾಹುಲ್ ಎಂಬಾತನ ಪರಿಚಯವಾಗಿದೆ. ಬಳಿಕ ಆತನ ಮೇಲೆ ಪ್ರೀತಿ ಉಂಟಾಗಿ ಆತನನ್ನು ಮದುವೆಯಾಗಲು ದೆಹಲಿಗೆ ಹೋಗಲು ನಿರ್ಧಾರ ಮಾಡಿದ್ದಳು. ಆದರೆ ರಾಹುಲ್ ಹಾಗೂ ಆತನ ಕುಟುಂಬದವರು ಆಕೆಯ ಮಗು ಇರುವುದರಿಂದ ಹತಾಶೆಗೊಂಡ ಮಹಿಳೆ ತನ್ನ ಮಗುವನ್ನು ಕತ್ತುಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

Next Post

Local News: 69ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗುಡಿಬಂಡೆ ಸುರಸದ್ಮಗಿರಿ ಬೆಟ್ಟದಲ್ಲಿ ಕನ್ನಡ ಧ್ವಜಾರೋಹಣ

Sun Nov 24 , 2024
Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಸುರಸದ್ಮಗಿರಿ ಬೆಟ್ಟದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ) ಹಾಗೂ ಗೌರಿಬಿದನೂರು ಹೊಯ್ಸಳ ಟ್ರೆಕ್ಕಿಂಗ್ ತಂಡ ಹಾಗೂ ಯುವಕ- ಯುವತಿಯರು ಕನ್ನಡ ಧ್ವಜಾರೋಹಣವನ್ನು ಮಾಡುವ ಮೂಲಕ ಬೆಟ್ಟದಲ್ಲಿ ರಾಜ್ಯೋತ್ಸವವನ್ನು ಆಚರಿಸಿದರು. ಈ ವೇಳೆ ಗುಡಿಬಂಡೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ಮಂಜುನಾಥ ಮಾತನಾಡಿ, ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ […]
Kannada Rajyostava on Gudibande Hill
error: Content is protected !!