Crime : ಕರ್ನಾಟಕದ ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ಮಹಿಳೆಯನ್ನು ನಡುರಸ್ತೆಯಲ್ಲೇ ಇರಿದು ಕೊಂದ ಕಿರಾತಕ..!

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ಜನಬೀಡಿತ ರಸ್ತೆಯಲ್ಲೇ ಘೋರ ದುರಂತವೊಂದು ಸಂಭವಿಸಿದೆ. ಪ್ರೀತಿ ಮತ್ತು ಸ್ನೇಹದ ಹೆಸರಿನಲ್ಲಿ ಹತ್ತಿರವಾಗಿದ್ದ ಯುವಕನೊಬ್ಬ, ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾದ (Crime News) ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

A shocking crime in Karnataka’s Yellapur where a woman was brutally stabbed to death in broad daylight after refusing to marry her partner.

Crime – ದುರಂತದ ಹಿನ್ನೆಲೆ ಏನು?

ಕೊಲೆಯಾದ ಮಹಿಳೆಯನ್ನು ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದ ರಂಜಿತಾ ಅವರಿಗೆ ಒಂದು ಮಗು ಇದೆ. ತನ್ನ ತಂದೆ-ತಾಯಿ ಮತ್ತು ಅಣ್ಣನೊಂದಿಗೆ ವಾಸವಾಗಿದ್ದ ಇವರು, ಸ್ಥಳೀಯ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು.

ಈ ನಡುವೆ, ರಫೀಕ್ ಎಂಬ ಯುವಕನ ಪರಿಚಯವಾಗಿ ಅದು ಸ್ನೇಹಕ್ಕೆ ತಿರುಗಿತ್ತು. ಕಳೆದ ಕೆಲವು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ರಫೀಕ್ ಆಗಾಗ ರಂಜಿತಾ ಮನೆಗೆ ಹೋಗಿ ಬರುತ್ತಿದ್ದ ಮತ್ತು ಎರಡೂ ಕುಟುಂಬಗಳ ನಡುವೆ ಉತ್ತಮ ಸಂಬಂಧವಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

‘ಮದುವೆ ಬೇಡ’ ಎಂದಿದ್ದೇ ಮುಳುವಾಯಿತೇ?

ಕಳೆದ ಕೆಲವು ತಿಂಗಳಿಂದ ರಫೀಕ್, ರಂಜಿತಾಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ, ಮೊದಲ ಮದುವೆಯ ಕಹಿ ಅನುಭವವಿದ್ದ ರಂಜಿತಾ, “ನನಗೆ ಈಗಿರುವ ಸಂಬಂಧವೇ ಸಾಕು, ಮತ್ತೆ ಮದುವೆಯ ಬಂಧನ ಬೇಡ” ಎಂದು ಸ್ಪಷ್ಟವಾಗಿ ಹೇಳಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ (Crime News) ಆಗಾಗ ವಾಗ್ವಾದ ನಡೆಯುತ್ತಿತ್ತು. Read this also : ಹೊಸ ವರ್ಷಕ್ಕೆ ‘ಆಂಟಿ’ಯಿಂದ ವಿಡಿಯೋ ಕಾಲ್‌: ಖುಷಿಯಿಂದ ಓಡಿಹೋದ ಪ್ರೇಮಿಗೆ ಮರಕ್ಕೆ ಕಟ್ಟಿ ಧರ್ಮದೇಟು…!

ನಡುರಸ್ತೆಯಲ್ಲೇ ನಡೆದ ಹತ್ಯೆ!

ಯಥಾಪ್ರಕಾರ ಶನಿವಾರ ಶಾಲೆಯ ಕೆಲಸ ಮುಗಿಸಿ ರಂಜಿತಾ ಮನೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ಅಡ್ಡಗಟ್ಟಿದ ರಫೀಕ್, ಮತ್ತೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ರಂಜಿತಾ ಈ ಬಾರಿಯೂ ಖಡಾಖಂಡಿತವಾಗಿ ನಿರಾಕರಿಸಿದಾಗ ಆಕ್ರೋಶಗೊಂಡ ರಫೀಕ್, ತನ್ನ ಬಳಿಯಿದ್ದ ಚಾಕುವಿನಿಂದ ನಡುರಸ್ತೆಯಲ್ಲೇ ಆಕೆಗೆ ಮನಸೋಇಚ್ಛೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ರಂಜಿತಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು (Crime News)  ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ರಫೀಕ್ ಸ್ಥಳದಿಂದ ಪರಾರಿಯಾಗಿದ್ದಾನೆ.

A shocking crime in Karnataka’s Yellapur where a woman was brutally stabbed to death in broad daylight after refusing to marry her partner.

ಪೊಲೀಸ್ ತನಿಖೆ ಚುರುಕು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು (Crime News)  ಪರಿಶೀಲನೆ ನಡೆಸಿದ್ದಾರೆ. ಸದ್ಯ ರಫೀಕ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *

Scroll to Top