Education – ಇಂದಿನ ಆಧುನಿಕ, ಸ್ಪರ್ಧಾತ್ಮಕ, ತಂತ್ರಜ್ಞಾನ ಯುಗದಲ್ಲಿ ವಿಜ್ಞಾನ ಸೇರಿದಂತೆ ತಾಂತ್ರಿಕ ಶಿಕ್ಷಣದ ಕಡೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚು ಒಲವು ತೋರುತ್ತಿದ್ದಾರೆ. ಈ ನಡುವೆ ಸಮಾಜ ವಿಜ್ಞಾನ ಸೇರಿದಂತೆ ಹಲವು ವಿಭಾಗಗಳಿಗೆ ವಿದ್ಯಾರ್ಥಿಗಳು ದಾಖಲಾಗುವುದು ಕಡಿಮೆಯಾಗುತ್ತಿದ. ಪದವಿ ಹಂತದ ಎಲ್ಲಾ ವಿಭಾಗಗಳಿಗೂ ಪ್ರಾಮುಖ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಯೋಜನಾ ನಿರ್ದೇಶಕ ರಫೀಕ್ ಅಭಿಪ್ರಾಯಪಟ್ಟರು.
Education – ಪದವಿಯ ಎಲ್ಲಾ ವಿಭಾಗಗಳಿಗೂ ಮಹತ್ವ ಇದೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್. ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ವಿಜ್ಞಾನ ಸೇರಿದಂತೆ ತಾಂತ್ರಿಕ ಶಿಕ್ಷಣದತ್ತ ಹೆಚ್ಚು ಆಸಕ್ತರಾಗಿರುತ್ತಾರೆ. ಜೊತೆಗೆ ಪೋಷಕರೂ ಸಹ ತಮ್ಮ ಮಕ್ಕಳನ್ನು ಅದೇ ವಿಭಾಗಗಳಿಗೆ ದಾಖಲು ಮಾಡಲು ಬಯಸುತ್ತಾರೆ. ಅದೇ ರೀತಿ ಪದವಿ ಹಂತದಲ್ಲಿ ಕಲೆ, ವಾಣಿಜ್ಯ ಸೇರಿದಂತೆ ಹಲವು ವಿಭಾಗಗಳಲ್ಲಿ ಓದಿದ ವಿದ್ಯಾರ್ಥಿಗಳೂ ಸಹ ಇಂದು ದೊಡ್ಡ ಮಟ್ಟದ ಸಾಧನೆ ಮಾಡಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಕಲಾ ಸೇರಿದಂತೆ ಇತರೆ ವಿಭಾಗಗಳಲ್ಲೂ ಸಹ ದಾಖಲಾಗಬೇಕು ಎಂದರು.
Read this also : School Day : ಮಕ್ಕಳಿಗೆ ಆಸ್ತಿ ನೀಡುವುದಕ್ಕಿಂತ, ಶಿಕ್ಷಣ ನೀಡುವುದು ಮುಖ್ಯ: ಶಾಸಕ ಸುಬ್ಬಾರೆಡ್ಡಿ….!
Education – ಸರ್ಕಾರಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ: ಅಫ್ಜಲ್ ಬಿಜಿಲಿ ಹೇಳಿಕೆ
ಬಳಿಕ ಕಾಲೇಜಿನ ಪ್ರಾಂಶುಪಾಲ ಅಫ್ಜಲ್ ಬಿಜಿಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಸಹ ವಿದ್ಯಾಭ್ಯಾಸದ ಹಂತದಲ್ಲೇ ಕಲಿಯಬೇಕು. ಕೇವಲ ಶಿಕ್ಷಣ ಮಾತ್ರವಲ್ಲದೇ ಮಾನವೀಯ ಮೌಲ್ಯಗಳನ್ನು ಸಹ ಕಲಿತಾಗ ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ. ಸದ್ಯ ನಮ್ಮ ಕಾಲೇಜಿನಲ್ಲಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲಾಗುತ್ತಿದೆ. ನುರಿತ ಹಾಗೂ ಅನುಭವಿ ಉಪನ್ಯಾಸಕರೂ ಸಹ ಕಾಲೇಜಿನಲ್ಲಿದ್ದಾರೆ. ಎಲ್ಲಾ ಸೌಲಭ್ಯಗಳು ಕಾಲೇಜಿನಲ್ಲಿ ದೊರೆಯುತ್ತವೆ. ನ್ಯಾಕ್ ಗ್ರೇಡ್ ಸಹ ಪಡೆದುಕೊಂಡಿದೆ. ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಲ್ಲಿ ಹೆಚ್ಚು ಶುಲ್ಕ ಪಾವತಿಸುವ ಬದಲು ಸರ್ಕಾರಿ ಶುಲ್ಕದ ಜೊತೆಗೆ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದಾಖಲಾಗಿ ಎಂದರು.
Education – ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು
ಈ ಸಮಯದಲ್ಲಿ ಕಾಲೇಜಿನ ಜಾಗದ ದಾನಿಗಳಾದ ಜಿ.ಎಸ್.ನಾಗರಾಜ್, ಕಾಲೇಜಿನ ಉಪನ್ಯಾಸಕ ನಯಾಜ್, ಕಾಲೇಜು ಅಭಿವೃದ್ದಿ ಸಮಿತಿಯ ಕೃಷ್ಣೇಗೌಡ ಸೇರಿದಂತೆ ಹಲವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಇದೇ ಸಮಯದಲ್ಲಿ ವಿವಿಧ ಕ್ರೀಡೆಗಳು, ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಿದರು. ಈ ಸಮಯದಲ್ಲಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣಪ್ಪ, ಅಶ್ವತ್ಥ್, ಕಾಲೇಜು ಅಭಿವೃದ್ದಿ ಸಮಿತಿಯ ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.