Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Health Camp : ಗುಡಿಬಂಡೆಯಲ್ಲಿ ಪ್ರತಿ ತಿಂಗಳು ಎರಡು ಉಚಿತ ಆರೋಗ್ಯ ಶಿಬಿರಗಳು – ರಾಜಣ್ಣ ಭರವಸೆ
    State

    Health Camp : ಗುಡಿಬಂಡೆಯಲ್ಲಿ ಪ್ರತಿ ತಿಂಗಳು ಎರಡು ಉಚಿತ ಆರೋಗ್ಯ ಶಿಬಿರಗಳು – ರಾಜಣ್ಣ ಭರವಸೆ

    By by AdminMay 9, 2025No Comments2 Mins Read
    Facebook Twitter Pinterest WhatsApp
    Health professionals conducting free medical check-ups at Gudibande health camp

    Table of Contents

    Toggle
    • Health Camp – ಸಂಚಾರಿ ಆರೋಗ್ಯ ಘಟಕದಿಂದ ಉಚಿತ ತಪಾಸಣೆ
      • Health Camp – ರಾಜ್ಯಾದ್ಯಂತ ವಿಸ್ತರಣೆ
        • Health Camp – ಶಿಬಿರದಲ್ಲಿ ಲಭ್ಯವಿದ್ದ ಸೇವೆಗಳು

    Health Camp -ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ, ಗುಡಿಬಂಡೆ ತಾಲೂಕಿನಲ್ಲಿ ಪ್ರತಿ ತಿಂಗಳು ಕನಿಷ್ಠ ಎರಡು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಸಮರ್ಪಕ ಸೇವಾ ಟ್ರಸ್ಟ್‌ನ ಮುಖ್ಯಸ್ಥರಾದ ರಾಜಣ್ಣ ಅವರು ಭರವಸೆ ನೀಡಿದ್ದಾರೆ. ಈ ಉಪಕ್ರಮವು ಗ್ರಾಮೀಣ ಭಾಗದ ಜನರ ಆರೋಗ್ಯ ಕಾಳಜಿಗೆ ಮಹತ್ವದ ಕೊಡುಗೆ ನೀಡಲಿದೆ.

    Health professionals conducting free medical check-ups at Gudibande health camp

    Health Camp – ಸಂಚಾರಿ ಆರೋಗ್ಯ ಘಟಕದಿಂದ ಉಚಿತ ತಪಾಸಣೆ

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಿಕಾಸ ಜನಕಲ್ಯಾಣ ಟ್ರಸ್ಟ್ ಗುಡಿಬಂಡೆ, ವಿಸ್ತಾರ ಫೈನಾನ್ಸಸ್, ರಾಘವೇಂದ್ರ ಗ್ರಾಮೀಣ ಆರೋಗ್ಯ ಸೇವಾ ಸಂಸ್ಥೆ ಹಾಗೂ ಸಮರ್ಪಕ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂಚಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರಾಜಣ್ಣ ಅವರು, “ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಸಂಚಾರಿ ವಾಹನದ ಮೂಲಕ ಉಚಿತ ವೈದ್ಯಕೀಯ ತಪಾಸಣೆಯನ್ನು ಒದಗಿಸಲಾಗುವುದು. ಈ ಆರೋಗ್ಯ ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

    Health professionals conducting free medical check-ups at Gudibande health camp

    Health Camp – ರಾಜ್ಯಾದ್ಯಂತ ವಿಸ್ತರಣೆ

    ಈಗಾಗಲೇ ತಮಿಳುನಾಡಿನ ತೆರಿಯೂರು, ವೆಲ್ಲೂರು, ಧರ್ಮಪುರಿ ಹಾಗೂ ಕರ್ನಾಟಕದ ರಾಯಚೂರಿನಲ್ಲಿ ಯಶಸ್ವಿಯಾಗಿ ಇಂತಹ ಶಿಬಿರಗಳನ್ನು ಆಯೋಜಿಸಲಾಗಿದೆ. ಗುಡಿಬಂಡೆಯಲ್ಲಿ ಇದು ಐದನೆಯ ಶಿಬಿರವಾಗಿದೆ. ಮುಂದಿನ ದಿನಗಳಲ್ಲಿ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಒಟ್ಟು 12 ಸಂಚಾರಿ ತಪಾಸಣಾ ವಾಹನಗಳ ಮೂಲಕ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಲಾಗುವುದು ಎಂದು ರಾಜಣ್ಣ ಅವರು ತಿಳಿಸಿದರು. ಈ ಸೇವೆಯನ್ನು ಆಯಾ ಭಾಗದ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಹೇಳಿದರು.

    Health Camp – ಶಿಬಿರದಲ್ಲಿ ಲಭ್ಯವಿದ್ದ ಸೇವೆಗಳು

    ಸಂಚಾರಿ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ರಕ್ತದೊತ್ತಡ (ಬಿ.ಪಿ) ತಪಾಸಣೆ, ಮಧುಮೇಹ (ಶುಗರ್) ತಪಾಸಣೆ, ಡಯಾಬಿಟಿಸ್‌ನಿಂದ ಉಂಟಾಗುವ ಕಾಲುಗಳ ತೊಂದರೆಗಳ ತಪಾಸಣೆ ಮತ್ತು ಚಿಕಿತ್ಸಾ ಸಮಾಲೋಚನೆಗಳನ್ನು ನಡೆಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು. ಈ ಶಿಬಿರದ ಪ್ರಯೋಜನವನ್ನು 83 ಜನ ಫಲಾನುಭವಿಗಳು ಪಡೆದುಕೊಂಡರು. Read this also : ನಾಲಿಗೆ ತಿಳಿಸುವ ಆರೋಗ್ಯ ರಹಸ್ಯಗಳು: ನಿಮ್ಮ ನಾಲಿಗೆಯ ಬಣ್ಣ ಈ ರೀತಿಯಾಗಿದ್ದರೆ ಈ ರೋಗಗಳು ಇರಬಹುದು!

    Health professionals conducting free medical check-ups at Gudibande health camp

    Health Camp – ಗಣ್ಯರ ಉಪಸ್ಥಿತಿ

    ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಂಸ್ಥೆಯ ಶ್ರೀಧರ್ ಸಾಗರ್ ಜೀ, ರಾಘವೇಂದ್ರ ಗ್ರಾಮೀಣ ಆರೋಗ್ಯ ಸೇವಾ ಸಂಸ್ಥೆಯ ಅಧ್ಯಕ್ಷ ನಾಗರಾಜ್, ಡಾ. ನಿಖಿತ, ಡಾ. ನಾಗರಾಜ್, ಡಾ. ಯೋಗೀಶ್, ಗ್ರಾಮ ವಿಕಾಸ ಸಂಸ್ಥೆಯ ವಾಹಿನಿ ಸುರೇಶ್, ಮಮತ, ಜಿಲ್ಲಾ ಸಂಯೋಜಕ ಮುನಿರಾಜು, ನರಸಿಂಹ ಮೂರ್ತಿ, ಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಜ್, ಗುಡಿಬಂಡೆ ಆಸ್ಪತ್ರೆಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Free health services for villages Free medical check-up Gudibande Gudibande health camp Health camp in Chikkaballapur Mobile health unit Rajanna Rural health initiative Karnataka Samarpaka Seva Trust health camp
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.