HomeStateCooperative Societies : ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ ಬೇಡ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸಲಹೆ

Cooperative Societies : ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ ಬೇಡ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸಲಹೆ

“ಸಹಕಾರ ಸಂಘಗಳು (Cooperative Societies) ಗ್ರಾಮೀಣ ಭಾಗದ ರೈತರ ಮತ್ತು ಬಡ ಜನರ ಪಾಲಿನ ಜೀವನಾಡಿಗಳು. ಇಂತಹ ಪವಿತ್ರ ಕ್ಷೇತ್ರದಲ್ಲಿ ರಾಜಕೀಯ ಬಣ್ಣ ಬಳಿಯುವುದು ಆರೋಗ್ಯಕರ ಬೆಳವಣಿಗೆಯಲ್ಲ,” ಎಂದು ಗುಡಿಬಂಡೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ನಿಯಮಿತ (CHIMUL) ಹಾಗೂ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ನೂತನ ನಿರ್ದೇಶಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

Gudibande MLA S N Subbareddy addressing CHIMUL event on cooperative societies and dairy farming development

Cooperative Societies – ಸಹಕಾರ ಸಂಘಗಳ ಬಲವರ್ಧನೆಗೆ ಕಿವಿಮಾತು

ಸಹಕಾರ ಸಂಘಗಳು ರೈತರ ಮತ್ತು ಗ್ರಾಮೀಣ ಜನರ ಜೀವನಾಡಿಯಿದ್ದಂತೆ. ಈ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಬಣ್ಣ ಬಳಿಯುವುದು ಸಂಘದ ಹಿತದೃಷ್ಟಿಯಿಂದ ಸರಿಯಲ್ಲ. ರಾಜಕೀಯೇತರವಾಗಿ ಚುನಾವಣೆಗಳು ನಡೆದಾಗ ಮಾತ್ರ ಸಹಕಾರ ಸಂಘಗಳು ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಸಹಕಾರ (Cooperative Societies)  ಕ್ಷೇತ್ರವು ಪಕ್ಷಾತೀತವಾಗಿ ಕೆಲಸ ಮಾಡಿದರೆ ಮಾತ್ರ ಕಟ್ಟಕಡೆಯ ಜನರಿಗೆ ಸೌಲಭ್ಯಗಳು ತಲುಪಲು ಸಾಧ್ಯವಾಗುತ್ತದೆ. ಚುನಾವಣೆಗಳ ಸಮಯದಲ್ಲಿ ರಾಜಕೀಯ ವೈಷಮ್ಯಗಳನ್ನು ತರುವುದರಿಂದ ಸಂಘದ ಬೆಳವಣಿಗೆ ಕುಂಠಿತಗೊಳ್ಳುತ್ತದೆ ಎಂದು ಅವರು ಎಚ್ಚರಿಸಿದರು.

ಹೈನುಗಾರಿಕೆಗೆ ಸರ್ಕಾರದ ಬೆಂಬಲ

ಸಹಕಾರ ಕ್ಷೇತ್ರವು ಸಂಪೂರ್ಣವಾಗಿ ರೈತರಿಗೆ ಸಂಬಂಧಿಸಿದ್ದಾಗಿದ್ದು, ಇಲ್ಲಿ ಹೈನುಗಾರಿಕೆ ದೊಡ್ಡ ಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೈನುಗಾರಿಕೆಗೆ ಸಿಗಬೇಕಾದ ಸೌಲಭ್ಯಗಳನ್ನು ಮತ್ತು ಹೊಸ ಕಾರ್ಯಕ್ರಮಗಳನ್ನು ಕ್ಷೇತ್ರಕ್ಕೆ ತರಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕರು ಭರವಸೆ ನೀಡಿದರು. ನಮ್ಮ (Cooperative Societies) ಕ್ಷೇತ್ರದವರೇ ಚಿಮುಲ್ ಅಧ್ಯಕ್ಷರಾಗಿರುವುದರಿಂದ ಈ ಭಾಗದಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಬಲ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರೈತರ ಅಭಿವೃದ್ಧಿಗೆ ಚಿಮುಲ್ ಹೊಸ ಯೋಜನೆಗಳು

ನಂತರ ಮಾತನಾಡಿದ ಚಿಮುಲ್ ನೂತನ ಅಧ್ಯಕ್ಷ ಮಂಜುನಾಥರೆಡ್ಡಿ ಅವರು, ಮುಂದಿನ ದಿನಗಳಲ್ಲಿ ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಲು ಹಲವು ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದರು. ಈಗಾಗಲೇ ಗುಡಿಬಂಡೆ ಸೇರಿದಂತೆ ವಿವಿಧೆಡೆ ರೈತರಿಗೆ ಮೇವು ಬೀಜಗಳನ್ನು ವಿತರಿಸಲಾಗುತ್ತಿದ್ದು, ಅದನ್ನು (Cooperative Societies)  ಬೆಳೆಯಲು ಪ್ರೋತ್ಸಾಹಧನವನ್ನೂ ನೀಡಲಾಗುತ್ತಿದೆ. ರೈತರು ಗುಣಮಟ್ಟದ ಹಾಲು ಪೂರೈಕೆ ಮಾಡಲು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ಅವರು ಮನವಿ ಮಾಡಿದರು. Read this also : ಪೋಸ್ಟ್ ಆಫೀಸ್ ಹೊಸ ಧಮಾಕಾ: ತಿಂಗಳಿಗೆ ₹20,000 ಆದಾಯ ಪಡೆಯುವುದು ಈಗ ಸುಲಭ! ಪೂರ್ಣ ವಿವರ ಇಲ್ಲಿದೆ..!

Gudibande MLA S N Subbareddy addressing CHIMUL event on cooperative societies and dairy farming development

ಶೂನ್ಯ ಬಡ್ಡಿ ಸಾಲ ಹಾಗೂ ರಾಸುಗಳ ವಿಮೆ

ಕಾರ್ಯಕ್ರಮದಲ್ಲಿ ಮಾತನಾಡಿದ ಚಿಮುಲ್ ನಿರ್ದೇಶಕ ಆದಿನಾರಾಯಣರೆಡ್ಡಿ ಅವರು, ಗುಡಿಬಂಡೆ ಭಾಗದಿಂದ ಹಾಲಿನ ಪೂರೈಕೆ ಪ್ರಮಾಣ ಹೆಚ್ಚಾಗಬೇಕಿದೆ ಎಂದರು. ಶಾಸಕರು ಹೈನುಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದ ಅವರು, (Cooperative Societies)  ಹೈನುಗಾರರು ಅನಿರೀಕ್ಷಿತ ನಷ್ಟ ತಪ್ಪಿಸಲು ತಮ್ಮ ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಚಿಮುಲ್ ಶಿಬಿರ ಕಚೇರಿಯ ಸಿಬ್ಬಂದಿಯಾದ ನವ್ಯ, ಧರಣೇಂದ್ರ ಸೇರಿದಂತೆ ವಿವಿಧ ಹಾಲು ಉತ್ಪಾದಕ ಸಹಕಾರ ಸಂಘಗಳ ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

by Baluhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular