Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ, ಸೆ.15 ರವರೆಗೆ ವಿಸ್ತರಣೆ…!
    State

    HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ, ಸೆ.15 ರವರೆಗೆ ವಿಸ್ತರಣೆ…!

    By by AdminJune 21, 2024Updated:March 30, 20251 Comment2 Mins Read
    Facebook Twitter Pinterest WhatsApp
    HSRP number plate deadline extended 1

    HSRP – ಕರ್ನಾಟಕದಲ್ಲಿ HSRP ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ. 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (HSRP) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದೆ. ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ. ಈ ಹಿಂದೆ ಜೂನ್ 12ರ ಗುಡುವು ಅಂತ್ಯಗೊಂಡ ನಂತರ ಜುಲೈ 4ರ ವರೆಗೆ ಅದನ್ನು ವಿಸ್ತರಿಸಿತ್ತು. ಇದೀಗ ಮಹತ್ವದ ಸಭೆ ನಡೆಸಿ ಅಂತಿಮ ಗಡುವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸುವ ಮೂಲಕ ವಾಹನ ಸವಾರರಿಗೆ ಶುಭಸುದ್ದಿ ನೀಡಿದೆ.

    ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಎಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಅವಕಾಶ ನೀಡಲಾಗಿದೆ. ಆದರೆ ಸೆಪ್ಟೆಂಬರ್ 16ರಿಂದ ದುಬಾರಿ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಿದ್ದೇವೆ. ಆದರೂ ಹಲವು ವಾಹನಗಳು ಇನ್ನೂ ನಂಬರ್ ಪ್ಲೇಟ್ ಅಳವಡಿಸಿಲ್ಲ. ಹೆಚ್ಚಿನ ಸಂಖ್ಯೆಯ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಬಾಕಿ ಇರುವ ಕಾರಣ ಇದೀಗ ಕೊನೆಯದಾಗಿ ಗಡುವು ವಿಸ್ತರಿಸಲಾಗುತ್ತಿದೆ ಎಂದಿದ್ದಾರೆ. ಈವರೆಗೆ  ಕರ್ನಾಟಕದ 45 ಲಕ್ಷ ವಾಹನಗಳು ಮಾತ್ರ ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿದ್ದಾರೆ. ಈ ಕಾರಣ ವಾಹನ ಸವಾರರಿಗೆ ಇನ್ನಷ್ಟು ಸಮಯಾವಕಾಶ ನೀಡಲು ಸೆಪ್ಟೆಂಬರ್ 15ರವರೆಗೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ.

    HSRP number plate deadline

    ಅಂದಹಾಗೆ HSRP ನಂಬರ್‍ ಪ್ಲೇಟ್ ಎಂದರೇನು? ಈ ನಂಬರ್‍ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಿರುವುದು ಏಕೆ ಎಂಬ ವಿಚಾರಕ್ಕೆ ಬಂದರೇ, 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ HSRP ನಂಬರ್‍ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ಈ ನಂಬರ ಪ್ಲೇಟ್ ಗಳು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಹೊಸ ವಾಹನಗಳಲ್ಲಿ ಈಗಾಗಲೇ ಈ ಮಾದರಿಯ ನಂಬರ್‍ ಪ್ಲೇಟ್ ಗಳನ್ನು ಅಳವಡಿಸಲಾಗುತ್ತಿದೆ. ಈ ನಂಬರ್‍ ಪ್ಲೇಟ್ ಗಳಲ್ಲಿ ನಂಬರ್‍ ಗಳು ಉಬ್ಬಿಕೊಂಡಿರುವ ಮಾದರಿಯಲ್ಲಿ ಮುದ್ರಣವಾಗಿರುತ್ತದೆ. ನಂಬರ್‍ ಪ್ಲೇಟ್ ನ ಮೇಲ್ಬಾಗದ ಎಡಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದಾಗಿದೆ. 20 ಮಿ.ಮೀಟರ್‍ ಉದ್ದಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗುತ್ತದೆ. ಇದೀಗ HSRP ನಂಬರ್‍ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೊಮ್ಮೆ ಅವಧಿ ವಿಸ್ತರಣೆ ಮಾಡಿದ್ದು, ಆದಷ್ಟು ಶೀಘ್ರವಾಗಿ ನಂಬರ್‍ ಪ್ಲೇಟ್ ಅಳಡಿಸಿಕೊಳ್ಳಬೇಕಿದೆ. ಇದೇ ಕೊನೆಯ ದಿನಾಂಕವಾಗಿದ್ದು, ಒಂದು ವೇಳೆ ನಂಬರ್‍ ಪ್ಲೇಟ್ ಅಳವಡಿಸದೇ ಇದ್ದರೇ, ಮುಂದಿನ ದಿನಗಳಲ್ಲಿ ದುಬಾರಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

    HSRP Karnataka Government Karnataka Govt Ramalinga reddy Road Transport rules Rules
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    1 Comment

    1. KISNA MRTYR on June 21, 2024 6:32 am

      Keshavara (v) and (post)

      Reply
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.