HomeNationalRain Alert : ಮುಂದಿನ 6 ದಿನ ಕರ್ನಾಟಕ ಸೇರಿದಂತೆ ಹಲವೆಡೆ ಗುಡುಗು ಸಹಿತ ವರುಣನ...

Rain Alert : ಮುಂದಿನ 6 ದಿನ ಕರ್ನಾಟಕ ಸೇರಿದಂತೆ ಹಲವೆಡೆ ಗುಡುಗು ಸಹಿತ ವರುಣನ ಅಬ್ಬರ, ಎಲ್ಲೆಲ್ಲಿ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ..!

Rain Alert – ಮುಂಬರುವ ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಅಲರ್ಟ್ ಘೋಷಿಸಲಾಗಿದ್ದು, ನಿಮ್ಮ ಊರಿನಲ್ಲಿ ಮಳೆ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ. ಇನ್ನೂ ಮುಂದಿನ 6 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹೇಳಿದೆ. ಮುಖ್ಯವಾಗಿ ನಮ್ಮ ಕರ್ನಾಟಕದ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ!

Karnataka Rain Alert – IMD Weather Warning July 2025

Rain Alert – ಕರ್ನಾಟಕ: ಯಾವ ಜಿಲ್ಲೆಗೆ ಯಾವ ಅಲರ್ಟ್?

ರಾಜ್ಯಕ್ಕೆ ಮುಂಗಾರು ಅಬ್ಬರದ ಪ್ರವೇಶ ಮಾಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್‌ಗಳನ್ನು ಘೋಷಿಸಲಾಗಿದೆ.

ರೆಡ್ ಅಲರ್ಟ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು.

ಆರೆಂಜ್ ಅಲರ್ಟ್: ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಹಾಸನ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ನಿರೀಕ್ಷೆಯಿದ್ದು, ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

ಯೆಲ್ಲೋ ಅಲರ್ಟ್: ಉಳಿದಂತೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

Rain Alert – ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲೂ ಮಳೆ ಅಬ್ಬರ!

ತೆಲಂಗಾಣ ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ತೆಲಂಗಾಣದ ಕೆಲವು ಭಾಗಗಳಲ್ಲಿ ಭಾರೀ ಮಳೆ ನಿರೀಕ್ಷಿಸಿ ಆರೆಂಜ್ ಅಲರ್ಟ್ ನೀಡಲಾಗಿದೆ.

Karnataka Rain Alert – IMD Weather Warning July 2025

Rain Alert – ರಾಜಸ್ಥಾನದಿಂದ ದೆಹಲಿವರೆಗೆ: ಮಾನ್ಸೂನ್ ಅಬ್ಬರ ಹೇಗಿದೆ?

ರಾಜಸ್ಥಾನದಲ್ಲಿ “ಮರುಗಂಗಾ” ಎಂದೇ ಪ್ರಸಿದ್ಧವಾಗಿರುವ ಲೂನಿ ನದಿ ಮಳೆ ನೀರಿನಿಂದ ತುಂಬಿ ಹರಿಯುತ್ತಿದೆ. ವರ್ಷವಿಡೀ ಒಣಗಿದ ನದಿಯಲ್ಲಿ ನೀರು ಕಾಣುತ್ತಿದ್ದಂತೆ ಜನಸಾಗರವೇ ಹರಿದುಬರುತ್ತಿದೆ. ಇನ್ನು, ಬಿಹಾರದಲ್ಲಿ ಈ ಮಾನ್ಸೂನ್‌ನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ, ಭಾನುವಾರ ಮತ್ತು ಸೋಮವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read this also : Health Tips : ನಿಂಬೆ ಸಿಪ್ಪೆಯಲ್ಲಿ ಅಡಗಿದೆ ಆರೋಗ್ಯದ ನಿಧಿ! ಇನ್ನು ಕಸಕ್ಕೆಸೆಯುವ ಮುನ್ನ ಯೋಚಿಸಿ….!

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಗಾಗ ಮಳೆಯಾಗುತ್ತಿದೆಯಾದರೂ, ಆರ್ದ್ರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಇಂದು ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಆಶಿಸಿದೆ. ಶನಿವಾರ ನಗರದಲ್ಲಿ ಗರಿಷ್ಠ ತಾಪಮಾನ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಇತ್ತು. ಮಂಗಳವಾರದವರೆಗೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿಯೂ ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular