Close Menu
ISM Kannada News
    IPL 2025 Live Score
    What's Hot

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    May 14, 2025

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Janaspandana Meeting: ಜನರನ್ನು ಕಚೇರಿಗೆ ಅಲೆದಾಡಿಸದೇ, ಶೀಘ್ರವಾಗಿ ಜನರ ಕೆಲಸ ಮಾಡಿಕೊಡಿ: ಶಾಸಕ ಸುಬ್ಬಾರೆಡ್ಡಿ
    State

    Janaspandana Meeting: ಜನರನ್ನು ಕಚೇರಿಗೆ ಅಲೆದಾಡಿಸದೇ, ಶೀಘ್ರವಾಗಿ ಜನರ ಕೆಲಸ ಮಾಡಿಕೊಡಿ: ಶಾಸಕ ಸುಬ್ಬಾರೆಡ್ಡಿ

    By by AdminJuly 13, 2024No Comments2 Mins Read
    Facebook Twitter Pinterest WhatsApp
    Janaspandana meeting in Bagepalli 2

    ಬಾಗೇಪಲ್ಲಿ:  ಜನರು ವಿವಿಧ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ನಿಯಂತ್ರಿಸಿ, ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದೇ ಜನಸ್ಪಂದನಾ ಕಾರ್ಯಕ್ರಮದ (Janaspandana Meeting) ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ.  ವಿನಾ ಕಾರಣ  ಸಾರ್ವಜನಿಕರನ್ನು ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಿಸುವ  ಅಧಿಕಾರಿಗಳ ವಿರುದ್ದ  ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    Janaspandana meeting in Bagepalli 0

    ತಾಲೂಕಿನ ಗೂಳೂರು ಹೋಬಳಿ ವ್ಯಾಪ್ತಿಯ ಗೊರ್ತಪಲ್ಲಿ ಗ್ರಾಮದಲ್ಲಿ ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ (Janaspandana Meeting) ಕಾರ್ಯಕ್ರಮದಲ್ಲಿ  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು  ವಿವಿಧ ಕೆಲಸಗಳಿಗಾಗಿ ತಾಲೂಕಿನ 25-30 ಕಿ.ಮೀ ದೂರದ ಗ್ರಾಮಗಳಿಂದ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬಂದು ಕೆಲಸವಾಗದೆ ವಾಪಸ್ ಹೋಗುವಂತಹ ಪರಿಸ್ಥಿತಿ ಅಲ್ಲದೆ ಪ್ರತಿನಿತ್ಯವೂ ಕೆಲಸ ಕಾರ್ಯಗಳನ್ನು ಬಿಟ್ಟು ಕಚೇರಿಗಳ ಸುತ್ತ ಅಲೆದಾಡಲು  ಕಷ್ಟವಾಗುತ್ತೆ. ಇದರಿಂದ  ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಿ, ಜನರ ಸಮಸ್ಯೆಗಳನ್ನು ಅಲಿಸಲು ತಾಲೂಕು ಮಟ್ಟದ ಎಲ್ಲಾ  ಇಲಾಖೆಗಳ ಅಧಿಕಾರಿಗಳು ಮನೆಬಾಗಿಲಿಗೆ ಬಂದು ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ  ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಂದರು.

    ತಾಲೂಕಿನಲ್ಲಿ ಇತ್ತೀಚಿಗೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಳವಳವ್ಯಕ್ತಪಡಿಸಿದ ಅವರು ಯಾವುದೇ ಕಾರಣಕ್ಕೂ  18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡಬೇಡಿ, ಅನಿಷ್ಠ ಪದ್ದತಿಗಳಲ್ಲಿ ಒಂದಾಗಿರುವ ಬಾಲ್ಯ ವಿವಾಹ ಪದ್ದತಿಯನ್ನು ಸಮಾಜದಿಂದ ತೊಲಗಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದರು. ರಾಜ್ಯದಲ್ಲಿ ಡೆಂಗ್ಯೋ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ಸುತ್ತಮುತ್ತಲಿನಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದೇ ವೇಳೆ (Janaspandana Meeting) 75 ಫಲಾನುಭವಿಗಳಿಗೆ ಪಿಂಚಣಿ, 70 ಮಂದಿಗೆ ಆರೋಗ್ಯ ಕಾರ್ಡ್, 25 ಮಂದಿಗೆ ನರೇಗ ಯೋಜನೆಯ ಜಾಬ್ ಕಾರ್ಡ್ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ 25 ಲಕ್ಷ ರೂ.ಗಳ ಸಾಲದ ಚೆಕ್ ಸೇರಿದಂತೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

    Janaspandana meeting in Bagepalli

    ಈ  ಜನಸ್ಪಂದನಾ (Janaspandana Meeting)  ಕಾರ್ಯಕ್ರಮದಲ್ಲಿ  ನಿವೇಶನ, ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಸಾರಿಗೆ, ಪಡಿತಚೀಟಿ, ಪಿಂಚಣಿ ಸೇರಿದಂತೆ 100ಕ್ಕೂ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಲಾಯಿತು. ಹಲವು ಸಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಉಳಿದ ಸಮಸ್ಯೆಗಳಿಗೆ ಒಂದು ತಿಂಗಳೊಳಗೆ ಬಗೆಹರಿಸುವಂತೆ ಆಯಾ ಇಲಾಖೆ ಅಧಿಕಾರಿಗಳಿಗೆ  ಸೂಚನೆ ನೀಡಿದರು. ಈ ವೇಳೆ ತಹಸೀಲ್ದಾರ್ ಎನ್.ಮನೀಷಾ, ಡಿ.ಹೆಚ್.ಓ ಮಹೇಶ್ ಕುಮಾರ್,  ತಾ.ಪಂ ಇಒ ರಮೇಶ್, ಸಿಡಿಪಿಓ ರಾಮಚಂದ್ರಪ್ಪ, ಟಿಹೆಚ್‍ಓ ಡಾ.ಸತ್ಯನಾರಾಯಣರೆಡ್ಡಿ,  ಬೆಸ್ಕಾಂ ಎಇಇ ಸೋಮಶೇಕರ್, ಗೊರ್ತಪಲ್ಲಿ ಗ್ರಾ.ಪಂ ಅಧ್ಯಕ್ಷ ಸದಾಶಿವರೆಡ್ಡಿ, ಉಪಾದ್ಯಕ್ಷೆ ಉಮಾದೇವಿ, ಮುಖಂಡರಾದ ಶಂಕರರೆಡ್ಡಿ, ಮಲ್ಲಿಕಾರ್ಜುನರೆಡ್ಡಿ ನರೇಂದ್ರ ಬಾಬು ಮತ್ತಿತರರು ಇದ್ದರು.

    Bagepalli News Chikkaballapura News Governament Offices Janaspandana Meeting Kannada News Peoples work
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    May 14, 2025

    Namma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ ಸಂದರ್ಶನ…!

    May 14, 2025

    Local News : ಅದ್ದೂರಿಯಾಗಿ ನಡೆದ ಗಡಿದಂ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ….!

    May 13, 2025
    Leave A Reply Cancel Reply

    IPL 2025 Live Score
    Don't Miss

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    State May 14, 2025

    Ramanagara – ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದ ಅಮಾನುಷ ಘಟನೆಯೊಂದು ತೀವ್ರ ಆಘಾತವನ್ನುಂಟು ಮಾಡಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ…

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025

    ICSI Recruitment 2025 : 54 ರಿಸರ್ಚ್ ಅಸೋಸಿಯೇಟ್ & ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

    May 14, 2025

    Virat Kohli – ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ: ಇದರ ವಿಶೇಷತೆ ಏನು?

    May 14, 2025

    Namma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ ಸಂದರ್ಶನ…!

    May 14, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.