Sunday, June 29, 2025
HomeStateRain Update : ಕರ್ನಾಟಕಕ್ಕೆ ಮಳೆ ಅಲರ್ಟ್: ಮುಂದಿನ 5 ದಿನ ಭಾರೀ ಮಳೆ, IMD...

Rain Update : ಕರ್ನಾಟಕಕ್ಕೆ ಮಳೆ ಅಲರ್ಟ್: ಮುಂದಿನ 5 ದಿನ ಭಾರೀ ಮಳೆ, IMD ಎಚ್ಚರಿಕೆ..!

Rain Update – ಮೇ ತಿಂಗಳಲ್ಲೇ ಉತ್ತಮ ಮಳೆಯಾಗಿ ದಾಖಲೆ ಸೃಷ್ಟಿಸಿದ್ದ ಮುಂಗಾರು, ಈಗ ಕೊಂಚ ವಿರಾಮದ ನಂತರ ಮತ್ತೆ ಅಬ್ಬರಿಸಲು ಸಿದ್ಧವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಆದರೆ, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಈ ಭಾರೀ ಮಳೆಯು ಕೆಲವು ಪ್ರದೇಶಗಳಲ್ಲಿ ಅನಾಹುತಗಳನ್ನು ಸೃಷ್ಟಿಸುವ ಸಾಧ್ಯತೆಯೂ ಇದೆ. ಕರ್ನಾಟಕ ಸೇರಿದಂತೆ ಒಟ್ಟು 17 ರಾಜ್ಯಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.

IMD issues red alert as heavy monsoon rain lashes 17 Indian states including Karnataka

Rain Update – ಜೂನ್ 12 ರಿಂದ 17ರ ವರೆಗೆ ಭಾರಿ ಮಳೆ: ಎಚ್ಚರ!

IMD ನೀಡಿರುವ ಎಚ್ಚರಿಕೆ ಪ್ರಕಾರ, ಜೂನ್ 12 ರಿಂದ ಜೂನ್ 17ರ ವರೆಗೆ ಭಾರೀ ಮಳೆ ಸುರಿಯಲಿದೆ. ಇದರಿಂದ ನದಿಗಳು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುವ ಸಾಧ್ಯತೆಯಿದೆ. ಮಳೆಯ ಪ್ರಮಾಣ ಹೆಚ್ಚಾಗುವುದರಿಂದ ನೀರಿನ ಮಟ್ಟ ಅತಿಯಾಗಿ ಏರಿಕೆಯಾಗಲಿದೆ. ಅತಿಯಾದ ಮಳೆಯಿಂದ ಅಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ, ಎಲ್ಲರೂ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ನಿಮ್ಮ ಸುರಕ್ಷತೆಗೆ ಆದ್ಯತೆ ನೀಡಿ!

Rain Update – ಯಾವೆಲ್ಲಾ ರಾಜ್ಯಗಳಲ್ಲಿ ಮಳೆ ಆರ್ಭಟ?

ಹವಾಮಾನ ಇಲಾಖೆಯ ಪ್ರಕಾರ, ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಅಂಡಮಾನ್ ನಿಕೋಬಾರ್, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತಮಿಳುನಾಡು, ಪುದುಚೇರಿ, ತೆಲಂಗಾಣ, ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಈಶಾನ್ಯ ರಾಜ್ಯಗಳು ಈಗಾಗಲೇ ಮಳೆಯಿಂದ ತತ್ತರಿಸಿದ್ದು, ಅಲ್ಲಿ ಮತ್ತಷ್ಟು ಮಳೆ ಅವಾಂತರವನ್ನು ಹೆಚ್ಚಿಸಲಿದೆ.

Rain Update – ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

IMD ಕರ್ನಾಟಕದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 12 ರಿಂದ 15ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

Rain Alert in Karnataka - May 13 Weather Update for 21 Districts

ಇದಲ್ಲದೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಬಾರಿಯ ಮುಂಗಾರು ಮಳೆ ಮೇ 24 ರಂದೇ ಕರ್ನಾಟಕಕ್ಕೆ ಅಪ್ಪಳಿಸಿತ್ತು, ಇದು ಹಲವು ವರ್ಷಗಳ ದಾಖಲೆಯನ್ನು ಮುರಿದಿತ್ತು. ಮೇ ತಿಂಗಳಲ್ಲಿ ಉತ್ತಮ ಮಳೆಯಾದ ಕಾರಣ ರಾಜ್ಯದ ಬಹುತೇಕ ಜಲಾಶಯಗಳು ತುಂಬಿದ್ದವು. ಈಗ ಮತ್ತೆ ಜೂನ್ 12 ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಸೂಚಿಸಲಾಗಿದೆ.

Read this also : ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ: 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ…!

Rain Update – ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸಂಜೆ ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಪ್ರತಿದಿನ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಈ ಭಾರೀ ಮಳೆಯಿಂದ ಬೆಂಗಳೂರಿನ ಜನಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ. ಇಂದು ಸಂಜೆ ಕಾರ್ಪೊರೇಷನ್, ವಿಧಾನಸೌಧ, ಎಸ್.ಆರ್. ನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿ, ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular