HomeStateKarnataka Politics : ರಾಜಣ್ಣ ಸಂಪುಟದಿಂದ ವಜಾ: ಸಿದ್ದರಾಮಯ್ಯ ಸ್ಪಷ್ಟನೆ, ಅಭಿಮಾನಿಗಳಿಗೆ ಭಾವುಕ ಪತ್ರ…!

Karnataka Politics : ರಾಜಣ್ಣ ಸಂಪುಟದಿಂದ ವಜಾ: ಸಿದ್ದರಾಮಯ್ಯ ಸ್ಪಷ್ಟನೆ, ಅಭಿಮಾನಿಗಳಿಗೆ ಭಾವುಕ ಪತ್ರ…!

Karnataka Politics – ಕರ್ನಾಟಕ ರಾಜಕಾರಣದಲ್ಲಿ ಕೆ.ಎನ್. ರಾಜಣ್ಣ ಅವರ ಸಂಪುಟದಿಂದ ವಜಾ ವಿಚಾರ ಭಾರೀ ಸಂಚಲನ ಮೂಡಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ಮಾಹಿತಿಯನ್ನು ನೀಡಿದ್ದು, ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ವಜಾಗೊಂಡ ನಂತರ ರಾಜಣ್ಣ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

K.N. Rajanna removed from Karnataka Cabinet after Rahul Gandhi directive – CM Siddaramaiah explains decision - Karnataka Politics

Karnataka Politics – ರಾಹುಲ್ ಗಾಂಧಿ ನಿರ್ದೇಶನ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಶಾಸಕಾಂಗ ಪಕ್ಷದ ಸಭೆಯ ಆರಂಭದಲ್ಲೇ ರಾಜಣ್ಣ ಅವರ ಸಂಪುಟದಿಂದ ವಜಾ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, “ರಾಜಣ್ಣ ಅವರು ಮಾತನಾಡಿದ ಉದ್ದೇಶ ಬೇರೆಯದೇ ಆಗಿದ್ದರೂ, ಅದನ್ನು ವ್ಯಕ್ತಪಡಿಸಿದ ರೀತಿ ಸರಿ ಇರಲಿಲ್ಲ. ಈ ತಪ್ಪಿನಿಂದಾಗಿ ಅವರನ್ನು ಸಂಪುಟದಿಂದ ಕೈಬಿಡಬೇಕಾಯಿತು. ಇದು ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ತೆಗೆದುಕೊಂಡ ನಿರ್ಧಾರ” ಎಂದು ಸ್ಪಷ್ಟಪಡಿಸಿದರು.

Karnataka Politics – ರಾಜಣ್ಣ ತಲೆದಂಡ ಆಗಿದ್ದೇಕೆ?

ಕೆ.ಎನ್. ರಾಜಣ್ಣ ಅವರು ರಾಹುಲ್ ಗಾಂಧಿ ಅವರ ‘ಮತಗಳ್ಳತನ’ ಹೇಳಿಕೆಗೆ ವ್ಯಂಗ್ಯಭರಿತವಾಗಿ ಪ್ರತಿಕ್ರಿಯಿಸಿದ್ದರು. “ನಮ್ಮ ಕಾಲದಲ್ಲೇ ಅಲ್ವಾ ವೋಟರ್ ಲಿಸ್ಟ್ ಆಗಿದ್ದು, ಆಗೇನು ಕಣ್ಣುಮುಚ್ಚಿ ಕುಳಿತಿದ್ರಾ?” ಎಂದು ಹೇಳಿಕೆ ನೀಡಿದ್ದು, ಇದು ಹೈಕಮಾಂಡ್‌ನ ಕೆಂಗಣ್ಣಿಗೆ ಕಾರಣವಾಗಿತ್ತು. ರಾಜಣ್ಣ ಈ ಹಿಂದೆ ಕೂಡ ಹಲವು ಬಾರಿ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡಿದ್ದು, ಈ ಬಾರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಹಿನ್ನಡೆ ಉಂಟು ಮಾಡುವಂತಿದ್ದರಿಂದ ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ವಜಾ ನಿರ್ಧಾರ ಕೈಗೊಂಡಿದೆ. Read this also : ಕೋಡಿಮಠ ಶ್ರೀಗಳ ಭವಿಷ್ಯ: ಕರ್ನಾಟಕ ರಾಜಕೀಯದಲ್ಲಿ ಸಂಚಲನ, ಧರ್ಮಸ್ಥಳ ಪ್ರಕರಣದ ಬಗ್ಗೆ ಗಂಭೀರ ಎಚ್ಚರಿಕೆ

ಸಿದ್ದರಾಮಯ್ಯ ಕೈ ಬಲಪಡಿಸಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಮನವಿ

ಸಂಪುಟದಿಂದ ವಜಾಗೊಂಡ ನಂತರ ರಾಜಣ್ಣ ಅಭಿಮಾನಿಗಳು ಅವರ ತವರು ಕ್ಷೇತ್ರವಾದ ಮಧುಗಿರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ರಾಜಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. (Karnataka Politics)

K.N. Rajanna removed from Karnataka Cabinet after Rahul Gandhi directive – CM Siddaramaiah explains decision - Karnataka Politics

ರಾಜಣ್ಣ ಪತ್ರದಲ್ಲಿ ಏನಿದೆ?
  • ರಾಜಕೀಯ ಏರುಪೇರುಗಳು ಹೊಸತಲ್ಲ: “ರಾಜಕೀಯ (Karnataka Politics) ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ಬದಲಾವಣೆಗೆ ನಾನು ಎಂದೂ ಧೃತಿಗೆಟ್ಟಿಲ್ಲ. ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ.”
  • ತಪ್ಪಾದ ನಿರ್ಧಾರ ಮಾಡಬೇಡಿ: “ಅಭಿಮಾನದ ಅತಿರೇಕದಲ್ಲಿ ಯಾವುದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲವು ಯುವಕರು ನೋವು ಮಾಡಿಕೊಂಡಿದ್ದು ನನಗೆ ದುಃಖ ತಂದಿದೆ.”
  • ಸಾರ್ವಜನಿಕ ಆಸ್ತಿ ಹಾಳು ಮಾಡಬೇಡಿ: “ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ.”
  • ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಬೆಂಬಲಿಸಿ: “ನಾವೆಲ್ಲರೂ ಬುದ್ಧ, ಬಸವ, ವಾಲ್ಮೀಕಿ, ಅಂಬೇಡ್ಕರ್ ಹಾದಿಯಲ್ಲಿ ನಡೆಯಬೇಕು. ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತುಂಬಬೇಕು. ನಮ್ಮ ಮುಖ್ಯಮಂತ್ರಿಗಳಾದ (Karnataka Politics) ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ.”
by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular