ಸಿದ್ದರಾಮಯ್ಯ, ಮೋದಿ ಸರ್ಕಾರ ಹಾಗೂ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ, ಶುಭಗಳಿಗಿಂತ ಅಶುಭಗಳೇ ಜಾಸ್ತಿಯಂತೆ…!

ಅನೇಕ ವಿಪತ್ತುಗಳ ಬಗ್ಗೆ ಭವಿಷ್ಯ ನುಡಿದಂತಹ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮೋದಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಹಾಗೂ ದರ್ಶನ್ ಬಗ್ಗೆ ಸಹ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ ಹಾಗೂ ವಾಯುಕಂಟಕಗಳು ಹೆಚ್ಚಾಗಲಿದೆ. ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿ ಸಹ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಶ್ರೀಗಳು, ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಸಹ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಅಪಾಯವಿರುವುದಿಲ್ಲ. ಶ್ರಾವಣದಲ್ಲಿ ಮತ್ತೊಂದು ಸ್ಪೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿಯವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಇನ್ನೂ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿರುವ ಸಿದ್ದರಾಮಯ್ಯ ಸರ್ಕಾರ ಪತನವಾಗುತ್ತದೆ ಎಂಬ ಚರ್ಚೆಗಳ ಮಧ್ಯೆ ಏನು ಆಗುವುದಿಲ್ಲ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Kodishree comments in cbpur 0

ಅಷ್ಟೇಅಲ್ಲದೇ ಈ ಭಾರಿ ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಬರದಿದ್ದಕ್ಕೆ ಎನ್.ಡಿ.ಎ ಮೈತ್ರಿ ಸರ್ಕಾರ ರಚನೆ ಮಾಡಿದ್ದು, ಈ ಸರ್ಕಾರ ಬಹುದಿನಗಳ ಕಾಲ ಉಳಿಯುವುದಿಲ್ಲ ಎಂದು ವಿಪಕ್ಷಗಳು ಹೇಳುತ್ತಿದ್ದು, ಈ ಕುರಿತು ಸಹ ಕೋಡಿಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಮೋದಿಯವರ ಬಗ್ಗೆ ನಾನು ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಾಗುವಂತೆ ಮಾಡಿದ್ದಾರೆ.

ಇನ್ನೂ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ. ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬಗ್ಗೆ ಮಾತನಾಡಿ, ಉಮಾಪತಿಯೇ ಹೇಳಿದ್ದಾರೆ, ನಾನು ಕೋಡಿಮಠಕ್ಕೆ ಹೋದಾಗ ಕೋಪ ಕಡಿಮೆ ಮಾಡಿಕೊಳ್ಳಬೇಕು. ತಂದೆ ತಾಯಿ ಮಾತು ಕೇಳಬೇಕು ಎಂದಿದ್ದರು. ಅದರಂತೆ ನಾನು ನಡೆದುಕೊಂಡಿದ್ದೇನೆ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ ಅಂತಿದ್ದ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ.  ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು. ದರ್ಶನ್, ಉಮಾಪತಿ ಗಲಾಟೆ ವಿಚಾರವಾಗಿ ಮಾರ್ಮಿಕವಾಗಿ ನುಡಿದಿದ್ದಾರೆ.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? Viator Affiliate Widgets Manager The Wall – Media Gallery – jQuery Powered WooCommerce Shipping Method Conditions & Priorities FluxStore Manager – Vendor and Admin Flutter App for Woocommerce WPBakery YouTube Channel with Carousel Addon WP Guard – WordPress Security, Firewall & Anti-Spam EMO Reactions Pro – WordPress Plugin Animated Intro for Elementor Mingle SAAS – Social Auto Poster & Scheduler PHP Script Musik – WordPress Admin