Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Krishna Byre Gowda: ಹೆಚ್.ಡಿ.ಕೆ 60% ಕಮಿಷನ್ ಆರೋಪಕ್ಕೆ ಕೌಂಟರ್ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೇಗೌಡ
    State

    Krishna Byre Gowda: ಹೆಚ್.ಡಿ.ಕೆ 60% ಕಮಿಷನ್ ಆರೋಪಕ್ಕೆ ಕೌಂಟರ್ ಕೊಟ್ಟ ಕಂದಾಯ ಸಚಿವ ಕೃಷ್ಣಬೈರೇಗೌಡ

    By by AdminJanuary 8, 2025No Comments2 Mins Read
    Facebook Twitter Pinterest WhatsApp
    Krishna Byre Gowda comments about HDK 0

    Krishna Byre Gowda – ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು (H D Kumaraswamy)ರಾಜ್ಯದಲ್ಲಿ 60% ಸರ್ಕಾರವಿದೆ ಎಂಬ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಕೌಂಟರ್‍ ಕೊಟ್ಟಿದ್ದು, ಕುಮಾರಸ್ವಾಮಿಯವರು ಚೆನ್ನಪಟ್ಟಣ ಉಪಚುನಾವಣೆಯ ಸೋಲಿನಿಂದ ಬೇಸತ್ತಿದ್ದಾರೆ ಎಂದಿದ್ದಾರೆ.

    Krishna Byre Gowda comments about HDK 2

    ಈ ಕುರಿತು ಗುಡಿಬಂಡೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತಿಚಿಗೆ ನಡೆದ ಚೆನ್ನಪಟ್ಟಣ ಉಪಚುನಾವಣೆಯಲ್ಲಿ ತನ್ನ ಮಗ ಸೋತಿದ್ದ ಕಾರಣ ಕುಮಾರಸ್ವಾಮಿಯವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದ ರಾಜ್ಯ ಸರ್ಕಾರದ ಮೇಲೆ 60% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಚೆನ್ನಪಟ್ಟಣದ ಚುನಾವಣೆಯಲ್ಲಿ ಜೆಡಿಎಸ್+ಬಿಜೆಪಿ ಎರಡೂ ಪಕ್ಷಗಳ ಮತಗಳಿಗಿಂತ ಕಾಂಗ್ರೇಸ್ ಹೆಚ್ಚು ಪಡೆದುಕೊಂಡಿದೆ. ಜೆಡಿಎಸ್ ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡರೂ ಸಹ ಕಳೆದ ಬಾರಿ ಬಿಜೆಪಿ ಪಡೆದುಕೊಂಡಿದ್ದಕ್ಕಿಂತ 12 ಸಾವಿರ ಕಡಿಮೆ ಮತಗಳನ್ನು ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರಿಗೆ ಬಿಜೆಪಿಯವರು ಧೋಖಾ ಮಾಡಿದ್ದಾರೆ.

    ಪಾರ್ಲೀಮೆಂಟ್ ನಲ್ಲಿ ಬಿಜೆಪಿಯವರು ಏನೆಲ್ಲಾ ಮತಗಳನ್ನು ಹಾಕಿಸಿಕೊಳ್ಳಬೇಕೋ ಹಾಕಿಸಿಕೊಂಡಿದ್ದಾರೆ. ಪಾರ್ಲಿಮೆಂಟ್ ಸೀಟ್ ಗಳನ್ನು ಗೆದ್ದುಕೊಂಡರು. ಸ್ವತಃ ಕುಮಾರಸ್ವಾಮಿ ಮಗ ಚುನಾವಣೆಗೆ ನಿಂತಾಗ, ಈ ಹಿಂದೆ ದಳ ಹಾಗೂ ಬಿಜೆಪಿ ಎದುರಾಳಿಯಾಗಿ ಸ್ಪರ್ಧಿಸಿದಾಗ ದಳಕ್ಕೆ ಎಷ್ಟು ಮತಗಳು ಬಂದಿತ್ತೋ, ಹಿಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಅದಕ್ಕಿಂತ 12 ಸಾವಿರ ಮತ ಕಡಿಮೆಯಾಗಿದೆ ಅಂದ್ರೇ ಬಿಜೆಪಿ ಓಟು ಎಲ್ಲಿ ಹೋಯ್ತು? ಇದರಿಂದ ಬಿಜೆಪಿಯವರ ಮೇಲೆ ಆರೋಪ ಮಾಡಲು ಆಗದೇ ಬೇರೆಯವರ ಮೇಲೆ ಹಿಟ್ ಅಂಡ್ ರನ್ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಕೈಯಲ್ಲಿಯೇ ಇದೆಯಲ್ಲ ಇಡಿ, ಸಿಬಿಐ ಗಳನ್ನು ಚೂ ಬಿಟ್ಟು ಏನೆಲ್ಲಾ ಮಾಡ್ತಾ ಇದ್ದಾರೆ ಅಲ್ವಾ ಮಾಡಲಿ, ಎಲ್ಲವನ್ನೂ ನಾವು ಎದುರಿಸುತ್ತೇವೆ ಎಂದರು.

    Krishna Byre Gowda comments about HDK 1

    ಇದೇ ಸಮಯದಲ್ಲಿ ಡಿನ್ನರ್‍ ಪಾಲಿಟಿಕ್ಸ್ ಬಗ್ಗೆ ಸಹ ಮಾತನಾಡಿ, ಡಿನ್ನರ್‍ ಗಳು ಅವರವರ ವೈಯುಕ್ತಿಕ, ಎಲ್ಲರಿಗೂ ಅಧಿಕಾರದ ಮೇಲೆ ಆಸೆಯಿರುತ್ತದೆ. ಸದ್ಯ ಸಾರ್ವಜನಿಕವಾಗಿ ಮುಖ್ಯವಲ್ಲ. ಅದು ಅವರ ವೈಯುಕ್ತಿಕ ವಿಚಾರವಾಗಿದೆ. ಜನಗಳ ಸಮಸ್ಯೆ ಚರ್ಚಾ ವಿಷಯವಾಗಬೇಕು. ಅದನ್ನು ಬಿಟ್ಟು ಪ್ರತಿಯೊಬ್ಬರಿಗೂ ಅಧಿಕಾರದ ಮೇಲೆ ಆಸೆಯಿರುತ್ತದೆ. ಸಾರ್ವಜನಿಕ ಜೀವನದಲ್ಲಿದ್ದಾಗ ನಾವ್ಯಾರು ಸನ್ಯಾಸಿಗಳಲ್ಲ. ಒಂದು ಅಧಿಕಾರ ಸಿಕ್ಕಾಗ ಮತ್ತೊಂದು ಅಧಿಕಾರದ ಮೇಲೆ ಆಸೆಯಾಗೋದು ಸ್ವಾಭಾವಿಕವಾದುದು, ರಾಜಕೀಯದಲ್ಲಿ ನಿರಂತರವಾಗಿ ನಡೆಯುವಂತಹದು. ಆದರೆ ಅದನ್ನೆಲ್ಲವನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋದು ಹೆಚ್ಚಿನ ಗಮನ ಕೊಡೋದು ಸೂಕ್ತ ಎಂದರು.

    BJP Chennapattana Congress Party Dinner Politics H D Kumaraswamy JDS Karnataka Politics Krishna Byre Gowda Nikhil Kumaraswamy Revenue Minister
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.