Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Farmers : ಭೂ ರಹಿತರರಿಗೆ ಜಮೀನು ನೀಡುವಲ್ಲಿ ಸರ್ಕಾರಗಳು, ಅಧಿಕಾರಿಗಳು ಸಂಪೂರ್ಣ ವಿಫಲ: ರಾಮನಾಥರೆಡ್ಡಿ
    State

    Farmers : ಭೂ ರಹಿತರರಿಗೆ ಜಮೀನು ನೀಡುವಲ್ಲಿ ಸರ್ಕಾರಗಳು, ಅಧಿಕಾರಿಗಳು ಸಂಪೂರ್ಣ ವಿಫಲ: ರಾಮನಾಥರೆಡ್ಡಿ

    By by AdminApril 10, 2025No Comments2 Mins Read
    Facebook Twitter Pinterest WhatsApp
    Farmers' protest for land rights under Bagar Hukum scheme in Gudibande

    Table of Contents

    Toggle
    • Farmers – ಪತ್ರಿಕಾಗೋಷ್ಟಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷರ ಆರೋಪ
      • Farmers – ರೈತರ ಹಕ್ಕಿಗಾಗಿ ಹೋರಾಟ: ಕರ್ನಾಟಕ ಭೂ ಹಕ್ಕುದಾರರ ವೇದಿಕೆ
        • Farmers – ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದವರು

    Farmers – ಸುಮಾರು ವರ್ಷಗಳಿಂದ ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದಂತಹ ರೈತರಿಗೆ ಸಾಗುವಳಿ ಚೀಟಿ ನೀಡುವಲ್ಲಿ ಸರ್ಕಾರಗಳು ಹಾಗೂ ಅಧಿಕಾರಿಗಳೂ ಸಹ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥರೆಡ್ಡಿ ಆರೋಪಿಸಿದರು.

    Farmers – ಪತ್ರಿಕಾಗೋಷ್ಟಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷರ ಆರೋಪ

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಕರ್ನಾಟಕ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್‍ ಬಣದ ಕಚೇರಿಯಲ್ಲಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಭೂ ರಹಿತ ರೈತರು ಸರ್ಕಾರದ ಬಗರ್‍ ಹುಕುಂ ಯೋಜನೆಯಡಿ ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ತಮಗೆ ಜಮೀನು ಮಂಜೂರು ಮಾಡಿ ಸಾಗುವಳಿ ಚೀಟಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.

    Farmers' protest for land rights under Bagar Hukum scheme in Gudibande

    ಈಗಾಗಲೇ ಫಾರಂ.50, 53 ಹಾಗೂ 57 ರಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಸುಮಾರು 15-20 ವರ್ಷಗಳ ಹಿಂದೆ ಫಾರಂ ನಂ 50 ಹಾಗೂ 53 ರಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಇಂದಿಗೂ ಸಾಗುವಳಿ ಚೀಟಿ ನೀಡಿಲ್ಲ. ಇನ್ನೂ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಿದ ಅನೇಕ ರೈತರ ಅರ್ಜಿಗಳನ್ನು  ರದ್ದು ಮಾಡಿದ್ದಾರೆ. ಚುನಾವಣೆಗಳ ಸಮಯದಲ್ಲಿ ಮಾತ್ರ ಕೆಲವು ರೈತರಿಗೆ ಸಾಗುವಳಿ ಚೀಟಿಗಳನ್ನು ನೀಡುತ್ತಾರೆ. ಆದರೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಸಾಗುವಳಿ ಚೀಟಿಗಳನ್ನು ನೀಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದೀಗ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ಒಳ್ಳೆಯ ಕೆಲಸವನ್ನು ಕೈಗೆತ್ತಿಕೊಂಡಿದ್ದು, ಅವರೊಂದಿಗೆ ನಮ್ಮ ರೈತ ಸಂಘ ಸಹ ಕೈಜೋಡಿಸುತ್ತದೆ ಎಂದರು.

    Farmers – ರೈತರ ಹಕ್ಕಿಗಾಗಿ ಹೋರಾಟ: ಕರ್ನಾಟಕ ಭೂ ಹಕ್ಕುದಾರರ ವೇದಿಕೆ

    ಬಳಿಕ  ಕಚೇರಿಯಲ್ಲಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆಯ ನಿರ್ದೇಶಕ ಬಾಲಗಂಗಾಧರ್‍ ಮಾತನಾಡಿ, ನಮ್ಮ ವೇದಿಕೆ ವತಿಯಿಂದ ಈಗಾಗಲೇ ಪಕ್ಕದ ಗೌರಿಬಿದನೂರು ತಾಲೂಕಿನಲ್ಲಿ ಪ್ರತಿಭಟನೆ, ಹೋರಾಟಗಳನ್ನು ಮಾಡಿ ಸುಮಾರು ವರ್ಷಗಳಿಂದ ರಚನೆಯಾಗದಂತಹ ಬಗರ್‍ ಹುಕುಂ ಸಮಿತಿಯನ್ನು ರಚನೆಯಾಗುವಂತೆ ಮಾಡಿದೆ. ಇದೀಗ ರೈತರಿಗೆ ಹಂತ ಹಂತವಾಗಿ ಜಮೀನು ಸಾಗುವಳಿ ಚೀಟಿ ದೊರೆಯಲಿದೆ. ಅದೇ ರೀತಿ ಗುಡಿಬಂಡೆಯಲ್ಲೂ ಸಹ ಸಾಕಷ್ಟು ರೈತರು ಸಾಗುವಳಿ ಚೀಟಿಗಾಗಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಗುಡಿಬಂಡೆಯಲ್ಲಿ ಸಮಿತಿ ರಚನೆಯಾಗಿ ವರ್ಷ ಕಳೆದಿದ್ದರೂ ಇನ್ನೂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ. ಆದ್ದರಿಂದ ನಮ್ಮ ವೇದಿಕೆಯ ವತಿಯಿಂದ ಗ್ರಾಮಗಳಲ್ಲಿ ಸರ್ವೆ ನಡೆಸಿ ಅರ್ಜಿ ಸಲ್ಲಿಸಿದ ರೈತರನ್ನು ಪತ್ತೆ ಮಾಡಿ, ಸಂಘಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕು ಕಚೇರಿಯ ಮುಂಭಾಗ ಹೋರಾಟ, ಪ್ರತಿಭಟನೆಗಳನ್ನು ಮಾಡಿ ರೈತರಿಗೆ ಜಮೀನು ದೊರಕಿಸಿಕೊಡುವ ಕೆಲಸ ಮಾಡಲಾಗುತ್ತದೆ. ಇದರ ಜೊತೆಗೆ ಕೂಲಿ ಕಾರ್ಮಿಕರು, ರೈತರಿಗೆ ಆಯುಷ್ಮಾನ್ ಕಾರ್ಡ್, ಲೇಬರ್‍ ಕಾರ್ಡ್ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ದೊರಕಿಸಿಕೊಡುವಂತ ಪ್ರಯತ್ನಗಳನ್ನು ಸಹ ಮಾಡಲಾಗುತ್ತದೆ ಎಂದರು.

    Read this also : Farmers Protest : ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಬೆಸ್ಕಾಂ ಮುಂದೆ ರೈತರ ಪ್ರತಿಭಟನೆ….!

    Farmers – ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದವರು

    ಈ ವೇಳೆ ಚಲವಾದಿ ಸಂಘದ ತಾಲೂಕು ಅಧ್ಯಕ್ಷ ಎಂ.ಸಿ.ಚಿಕ್ಕನರಸಿಂಹಪ್ಪ, ಕರ್ನಾಟಕ ಭೂ ಹಕ್ಕುದಾರರ ವೇದಿಕೆಯ ಗುಡಿಬಂಡೆ ತಾಲೂಕು ಸಮಿತಿಯ ಅಧ್ಯಕ್ಷ ಜಯರಾಂ, ಸಂಯೋಜಕಿ ಸೌಭಾಗ್ಯ,  ಕಾರ್ಯದರ್ಶಿ ಬೈಯಣ್ಣ, ಉಪಾಧ್ಯಕ್ಷ ಗೌಸ್ ಪೀರ್‍, ಸದಸ್ಯರಾದ ಶ್ರೀನಿವಾಸ್, ಭಾರತಮ್ಮ, ಕರ್ನಾಟಕ ಭೂ ಹಕ್ಕುದಾರರ ವೇದಿಕೆಯ ಸಿಬ್ಬಂದಿಯಾದ ಸಂತೋಷ್ ಕುಮಾರ್‍ ಹಾಗೂ ಅನುಷಾ ಸೇರಿದಂತೆ ಹಲವರು ಇದ್ದರು.

    Bagar Hukum scheme Karnataka Farmers protest Gudibande Form 50 53 57 land application Gudibande land rights news Karnataka Bhoohakkudara Vedike Karnataka government land cultivation Karnataka land rights movement Karnataka state farmers association Ramanath Reddy farmers association Saaguvali certificate delay
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.