Local News – ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ, ಮನೋವಿಕಾಸ ಮತ್ತು ವ್ಯಸನಮುಕ್ತ ಜೀವನದ ಬಗ್ಗೆ ಅರಿವು ಮೂಡಿಸಲಾಯಿತು. ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನ ನೀಡುವುದು ಮತ್ತು ಸಮಾಜವನ್ನು ಸುರಕ್ಷಿತವಾಗಿಡಲು ಅವರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಯಿತು.

Local News – ದುಶ್ಚಟಗಳಿಂದ ದೂರವಿರಿ
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜನಜಾಗೃತಿ ವೇದಿಕೆಯ ಡಿ.ಎಲ್.ಪರಿಮಳ ಡಿ.ಎಲ್. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹದಿಹರೆಯದವರಲ್ಲಿ ಕಂಡುಬರುವ ಮಾನಸಿಕ ಬದಲಾವಣೆಗಳು, ಆರೋಗ್ಯದ ಮಹತ್ವ ಮತ್ತು ವ್ಯಸನಗಳಿಂದ ಕುಟುಂಬ ಹಾಗೂ ಸಮಾಜದ ಮೇಲೆ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಕೆಟ್ಟ ಚಟಗಳಿಗೆ ಬಲಿಯಾಗದೆ, ಸುಭದ್ರ ಸಮಾಜ ನಿರ್ಮಾಣದಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. Read this also : ವಾಟ್ಸಾಪ್ನಿಂದಲೇ ಕ್ಷಣಾರ್ಧದಲ್ಲಿ ಆಧಾರ್ ಡೌನ್ಲೋಡ್ ಮಾಡಿ…!
Local News – ಜೀವನದಲ್ಲಿ ಶಿಸ್ತು ಮತ್ತು ಗುರಿಯ ಮಹತ್ವ
ಶಾಲೆಯ ಶಿಕ್ಷಕಿ ವಿಜಯಲಕ್ಷ್ಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು, ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ಗುರಿಯನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಮುರಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ದಯಾನಿಧಿ, ಸೇವಾ ಪ್ರತಿನಿಧಿ ಶಿವಮ್ಮ ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

