HomeStateLokayukta : ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗುಡಿಬಂಡೆ ಗ್ರಾಮ ಆಡಳಿತಾಧಿಕಾರಿ…!

Lokayukta : ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗುಡಿಬಂಡೆ ಗ್ರಾಮ ಆಡಳಿತಾಧಿಕಾರಿ…!

Lokayukta – ರೈತರೊಬ್ಬರಿಂದ ತಮ್ಮ ಜಮೀನು ಪೋಡಿ ಮಾಡಲು ಹಣ ಪಡೆಯುತ್ತಿದ್ದಾಗ ಗ್ರಾಮ ಆಡಳಿತಾಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ನಾಗರಾಜ್ ಜಮೀನು ಪೋಡಿ ಮಾಡಲು ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದಿದ್ದಾನೆ.

Lokayukta officials catch Village Revenue Officer red-handed while accepting bribe

Lokayukta – ರೈತರ ಕೆಲಸ ಮಾಡಿಕೊಡಲು ಹಣಕ್ಕೆ ಬೇಡಿಕೆ

ಗುಡಿಬಂಡೆ ತಾಲೂಕಿನ ಬೆಣ್ಣೆಪರ್ತಿ ಗ್ರಾಮದ ರೈತ ಮಂಜುನಾಥ್ ರವರು ತಮ್ಮ 2.20 ಗುಂಟೆ ಜಮೀನನ್ನು ಪೋಡಿ ಹಾಗೂ ದುರಸ್ಥಿ ಮಾಡಿಸಲು ಗ್ರಾಮ ಆಡಳಿತಾಧಿಕಾರಿ ನಾಗರಾಜ್ ರವರಿಗೆ ಮನವಿ ಮಾಡಿದ್ದರು. ಆದರೆ ನಾಗರಾಜ್ ಈ ಕಾರ್ಯಕ್ಕಾಗಿ ಹಣಕ್ಕೆ ಬೇಡಿಕೆಯಿಟ್ಟಿದ್ದರಂತೆ. ಈ ಸಂಬಂಧ ರೈತ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಅದರಂತೆ ಡಿ.ವೈ.ಎಸ್.ಪಿ ವೀರೇಂದ್ರ ಕುಮಾರ್‍ ನೇತೃತ್ವದಲ್ಲಿ ದಾಳಿ ನಡೆಸಿ, ಹಣ ಪಡೆಯುತ್ತಿದ್ದ ನಾಗರಾಜ್ ರನ್ನು ಹಿಡಿದಿದ್ದಾರೆ.

ಮಾಹಿತಿಯ ಪ್ರಕಾರ ನಾಗರಾಜ್ 55 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾನೆ. ಈ ದಾಳಿಯಲ್ಲಿ ಲೋಕಾಯುಕ್ತ ಇನ್ಸ್‌ ಪೆಕ್ಟರ್‍ ನಿರ್ಮಲ ಹಾಗೂ ಸಿಬ್ಬಂದಿ ಹಾಜರಿದ್ದರು.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular