HomeStateValmiki Jayanthi: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಣ್ಣೀರಾಕಿದ ಶಾಸಕಿ ರೂಪಕಲಾ….!

Valmiki Jayanthi: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕಣ್ಣೀರಾಕಿದ ಶಾಸಕಿ ರೂಪಕಲಾ….!

ಇಂದು ರಾಜ್ಯದಾದ್ಯಂತ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗಿದೆ. ಅದರಂತೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ ಸಭಾಂಗಣದಲ್ಲಿ ಕೆಜಿಎಫ್ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ,

Roopakala Shashidhar cried in valmiki jayanthi 1

ಕೋಲಾರ ಜಿಲ್ಲೆಯ ಕೆಜಿಎಫ್ ನಗರಸಭೆ ಸಭಾಂಗಣದಲ್ಲಿ ಕೆಜಿಎಫ್ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕಿ ರೂಪಕಲಾ ಶಶಿಧರ್‌ ಭಾಗವಹಿಸಿ ಮಾತನಾಡಿದರು. ರಾಮಾಯಣದಲ್ಲಿ ಸೀತೆ ಮಾತೆ ಮತ್ತು ಮಹಾಭಾರತದಲ್ಲಿ ದ್ರೌಪದಿಗೆ‌ ಅಪಮಾನವಾಗುತ್ತೆ. ಇವೆಲ್ಲವನ್ನು ಇಬ್ಬರಿಬ್ಬರು‌‌ ಸಹಿಸಿಕೊಳ್ಳುತ್ತಾರೆ. ಇಂದಿಗೂ ಸಹ ಮಹಿಳೆ ಚರಿತ್ರೆವಧ್ಯೆ ನಡೆಯುತ್ತಲೆ ಇದೆ ಎಂದು ತಿಳಿಸಿದ್ದಾರೆ. ಸಮಾಜದಲ್ಲಿ ಮಹಿಳೆಯ ಚಾರಿತ್ರ್ಯವಧೆಯಾದಾಗ ಆ ಮಹಿಳೆ ಅನುಭವಿಸುವ ನೋವು ಅಷ್ಟಿಷ್ಟಲ್ಲ, ಆ ನೋವು ಹೆಣ್ಣಿಗೆ ಮಾತ್ರ ಗೊತ್ತು ಎಂದು ಅವರು ಭಾವುಕರಾದರು.

Roopakala Shashidhar cried in valmiki jayanthi 0

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರು ಬರೆದಿರುವ ಮಹಾಕಾವ್ಯಗಳಾಗಿರುವ ರಾಮಾಯಣ ಮತ್ತು ಮಹಾಭಾರತ ನೆನೆದು ಭಾವುಕ‌ರಾಗಿ ಮಾತನ್ನಾಡಿದ್ದಾರೆ. ಶಾಸಕಿ ರೂಪಕಲಾ ಶಶಿಧರ್ ಮಹಿಳೆಯರ ಅಸಹಾಯಕತೆ ಮತ್ತು ಚಾರಿತ್ರ್ಯದ ಕುರಿತು ಮಾತನಾಡುತ್ತಾ ಇಂದಿಗೂ ಜನರು ಖುಷಿ ಪಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸುತ್ತಾ ಕಣ್ಣೀರು ಹಾಕಿದ್ದಾರೆ. ಸಮಾಜದಲ್ಲಿ ಮಹಿಳೆಯ ಚರಿತ್ರೆವಧ್ಯೆಯದಾಗ ಆ ಮಹಿಳೆ ಅನುಭವಿಸುವ ನೋವು ಅಷ್ಟಿಷ್ಟಲ್ಲ. ಆ ನೋವು ಹಣ್ಣಿಗೆ ಮಾತ್ರ ಗೊತ್ತಾಗುತ್ತೆ. ಮಹಿಳೆಯ ಅಸಹಾಯಕತೆ ಮತ್ತು ಚರಿತ್ರೆಯನ್ನು ಮಾತನಾಡುತ್ತಾ ಇಂದಿಗೂ ಜನ ಖುಷಿಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆ ಹೆಣ್ಣಿಗೆ ತಂದೆ ಮಾತ್ರ ಬೆಂಬಲವಾಗಿ ನಿಂತಿರುತ್ತಾರೆ ಎಂದು ರೂಪಕಲಾ ಶಶಿಧರ್‌ ಭಾವುಕರಾಗಿದ್ದಾರೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular