Sunday, June 29, 2025
HomeStateCPIM Protest : ಗುಡಿಬಂಡೆಯಲ್ಲಿ ಸಿಪಿಎಂ ಪ್ರತಿಭಟನೆ: ಬಡವರಿಗೆ ಭೂಮಿ ನೀಡುವಲ್ಲಿ ಸರ್ಕಾರ ವಿಫಲ, ಸಿದ್ದಗಂಗಪ್ಪ...

CPIM Protest : ಗುಡಿಬಂಡೆಯಲ್ಲಿ ಸಿಪಿಎಂ ಪ್ರತಿಭಟನೆ: ಬಡವರಿಗೆ ಭೂಮಿ ನೀಡುವಲ್ಲಿ ಸರ್ಕಾರ ವಿಫಲ, ಸಿದ್ದಗಂಗಪ್ಪ ಆರೋಪ…!

CPIM Protest – ಸುಮಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಡ ರೈತರಿಗೆ ಭೂಮಿ ಒಡೆತನದ ಹಕ್ಕು ಸಿಗುತ್ತಿಲ್ಲ, ಇದು ಸ್ಥಳೀಯ ಜನಪ್ರತಿನಿಧಿಗಳು ಮತ್ತು ತಾಲೂಕು ಆಡಳಿತದ ಸಂಪೂರ್ಣ ವೈಫಲ್ಯ ಎಂದು ಸಿಪಿಎಂ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ ಆರೋಪಿಸಿದ್ದಾರೆ. ಜೊತೆಗೆ ನರೇಗಾ ಯೋಜನೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಗೆ ಸಿಪಿಎಂ ಪಕ್ಷ ಒತ್ತಾಯಿಸಿದೆ.

CPIM Protest - protestors demanding land ownership rights for poor farmers in Gudibande, Karnataka

CPIM Protest – ಸರ್ಕಾರದ ವೈಫಲ್ಯ: ಬಡವರಿಗೆ ಭೂಮಿ ಯಾಕಿಲ್ಲ?

ಗುಡಿಬಂಡೆ ತಾಲೂಕು ಕಚೇರಿ ಮುಂಭಾಗ ಸಿಪಿಎಂ ಹಮ್ಮಿಕೊಂಡಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧದ ಪ್ರತಿಭಟನೆಯಲ್ಲಿ ಸಿದ್ದಗಂಗಪ್ಪ ಮಾತನಾಡಿದರು. “ತಾಲೂಕಿನಲ್ಲಿ ಬಗರ್‌ಹುಕುಂ ಯೋಜನೆಯಡಿ ಫಾರಂ 50, 53, 57ರಲ್ಲಿ ಅನೇಕ ರೈತರು ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅಕ್ರಮ ಸಕ್ರಮ ಸಮಿತಿಯಲ್ಲಿ ಭೂಮಿ ಮಂಜೂರಾಗುತ್ತಿರುವುದು ಶ್ರೀಮಂತರಿಗೆ, ಶಾಸಕರ ಬೆಂಬಲಿಗರಿಗೆ ಮಾತ್ರ. ಬಡವರಿಗೆ ಯಾವುದೇ ಜಮೀನು ಸಿಗುತ್ತಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ ಮಂಜೂರು ಮಾಡಿಸಲು ಮತ್ತು ದುರಸ್ತಿ ಮಾಡಿಸಲು ಹಣ ವಸೂಲಿ ಮಾಡುತ್ತಿದ್ದಾರೆ. ಈಗಾಗಲೇ ಮಂಜೂರಾದ ಜಮೀನುಗಳ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದು ಕೂಡ ನಡೆಯುತ್ತಿದೆ ಎಂದು ಆಕ್ರೋಷ ಹೊರಹಾಕಿದರು.

CPIM Protest – ಕೇಂದ್ರ-ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳು: ಜನಸಾಮಾನ್ಯರಿಗೆ ಸಂಕಷ್ಟ

ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮುನಿವೆಂಕಟಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳಿಂದ ಜನಜೀವನ ದುಸ್ತರವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರೈತ ವಿರೋಧಿ ಮಸೂದೆಗಳನ್ನು ರದ್ದುಪಡಿಸುವುದಾಗಿ ಹೇಳಿತ್ತು. ಆದರೆ, ಮೂರು ವರ್ಷಗಳಾದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಅನುದಾನ ಸಿಗುತ್ತಿಲ್ಲ ಎಂದು ಕ್ಷೇತ್ರದ ಶಾಸಕರು ಹೇಳುತ್ತಿದ್ದರು. ಈಗ ಕಾಂಗ್ರೆಸ್ ಸರ್ಕಾರವಿದ್ದರೂ ಯಾವುದೇ ವಿಶೇಷ ಅನುದಾನಗಳನ್ನು ತರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

CPIM Protest - protestors demanding land ownership rights for poor farmers in Gudibande, Karnataka

CPIM Protest – ಮೂಲಭೂತ ಸೌಲಭ್ಯಗಳ ಕೊರತೆ: ಕುಡಿಯುವ ನೀರು, ನಿವೇಶನ ಸಮಸ್ಯೆ

ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ಇದರಿಂದ ಜನರು ಫ್ಲೋರೈಡ್ ಮಿಶ್ರಿತ ನೀರನ್ನು ಕುಡಿಯುವಂತಾಗಿದೆ. ಗ್ರಾಮಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ಸಿಗುತ್ತಿಲ್ಲ. ರೈತರಿಗೆ ಸರಿಯಾದ ಸೌಲಭ್ಯಗಳು ಲಭ್ಯವಿಲ್ಲ. ಮಧ್ಯವರ್ತಿಗಳು ಮತ್ತು ದಳ್ಳಾಲಿಗಳ ಹಾವಳಿಯಿಂದ ಜನಸಾಮಾನ್ಯರು ಸಮಸ್ಯೆಗೊಳಗಾಗಿದ್ದಾರೆ ಎಂದು ಮುನಿವೆಂಕಟಪ್ಪ ವಿವರಿಸಿದರು. ತಮ್ಮ ಪಕ್ಷದ ಮುಖಂಡರು ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆದು ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

Read this also : ಗುಡಿಬಂಡೆಯ ಸ್ಥಳೀಯ ಸಮಸ್ಯೆಗಳಿಗಾಗಿ ಸಿಪಿಎಂ ಹೋರಾಟ: ಜೂನ್ 20 ರಂದು ಬೃಹತ್ ಪ್ರತಿಭಟನೆ..!

CPIM Protest –  ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಸಿಗ್ಬತ್ತುಲ್ಲಾ ಅವರು ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ತಮ್ಮ ವ್ಯಾಪ್ತಿಯಲ್ಲಿ ಬಗೆಹರಿಯುವ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮತ್ತು ಉಳಿದವುಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಅವರು ಭರವಸೆ ನೀಡಿದರು. ಈ ವೇಳೆ ಸಿಪಿಎಂ ಪಕ್ಷದ ಮುಖಂಡರಾದ ಜಯರಾಮರೆಡ್ಡಿ, ವೆಂಕಟರಾಜು, ರಾಜಪ್ಪ, ಆದಿನಾರಾಯಣ, ಶಿವಪ್ಪ, ದೇವರಾಜು, ಗಂಗರಾಜು, ಲಕ್ಷ್ಮೀನಾರಾಯಣ, ಸೋಮಶೇಖರ್, ಸೀನಪ್ಪ, ಶ್ರೀನಿವಾಸ್ ಸೇರಿದಂತೆ ಹಲವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular