ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ನಾವು ಉತ್ತಮ ಆರೋಗ್ಯ ಪಡೆದುಕೊಂಡು ಜೀವನ ನಡೆಸಬಹುದು. ಆದ್ದರಿಂದ ವಿದ್ಯಾಥಿಗಳು ಬಾಲ್ಯದಿಂದಲೇ ಯೋಗಾಸನಗಳನ್ನು ಕಲಿತು ಯೋಗಾಭ್ಯಾಸ ಮಾಡಬೇಕು ಎಂದು ಪಾವಗಡ ತಾಲೂಕಿನ ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕ ನರಸಿಂಹರೆಡ್ಡಿ ತಿಳಿಸಿದರು.
ಪಾವಗಡ ತಾಲೂಕಿನ ಗೌಡೇಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಇಂದು ಇಡೀ ವಿಶ್ವವೇ ಯೋಗ ದಿನಾಚರಣೆಯನ್ನು ಆಚರಣೆ ಮಾಡುತ್ತಿದೆ. ನಮ್ಮ ದೇಶದ ಹೆಮ್ಮೆಯ ಯೋಗ ಪದ್ದತಿಯನ್ನು ಇಡೀ ವಿಶ್ವ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಅಷ್ಟೇ ಅಲ್ಲದೇ ದಿನನಿತ್ಯ ಯೋಗಾಭ್ಯಾಸ ಮಾಡುವದರಿಂದ ನಮಗೆ ಒಳ್ಳೆಯ ಆರೋಗ್ಯ ಲಭಿಸುತ್ತದೆ. ಆದ್ದರಿಂದ ಯೋಗ ತರಬೇತಿಯನ್ನು ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು.
ಮಾನಸಿಕ ಒತ್ತಡದಿಂದ ದೂರವಿರಲು ಯೋಗಾಭ್ಯಸ ಸಹಕಾರಿ, ಪ್ರತಿಯೊಬ್ಬರು ತಮ್ಮ ಆರೋಗ್ಯ ಜೀವನವನ್ನು ಸುಸ್ಥಿಯಲ್ಲಿ ಕಾಪಡಿಕೊಳ್ಳಲು ಯೋಗ ಗುರುಗಳ ಮಾರ್ಗದರ್ಶನದಲ್ಲಿ ಯೋಗ ಶಿಕ್ಷಣಕ್ಕೆ ಮಹತ್ವ ನೀಡಿ ಮಾನಸಿಕ ಮತ್ತು ದೈಹಿಕ ಆರೋಗ ವೃದ್ದಿಗೆ ಮುಂದಾಗಬೇಕು. ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜೊತೆಗೆ ಯೋಗ ಶಿಕ್ಷಣ ಕೂಡ ಮುಖ್ಯವಾಗಿದ್ದು, ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಹ ನೀಡಬೇಕೆಂದರು. ನಮ್ಮ ದೇಶ ಯೋಗ ಸಂಪತ್ತಿನ ಸಿರಿವಂತಿಕೆಯನ್ನು ವಿಶ್ವದಲ್ಲೆ ಹೊಂದಿದ್ದು, ಸಿದ್ದರು, ಯೋಗಿಗಳು, ಋಷಿ ಮುನಿಗಳು ಯೋಗಾಭ್ಯಸದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಪತಾಂಜಲಿ ಮುನಿಗಳು ಇದರ ಮಹತ್ವವನ್ನು ಸಾರಿ ಇಂತಹ ಯೋಗ ವಿಶ್ವ ಶಾಂತಿ ಮತ್ತು ಉತ್ತಮ ಆರೋಗ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು.
ಇದೇ ಸಮಯದಲ್ಲಿ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಪೋಷಣೆ ಮಾಡುವ ಪ್ರತಿಜ್ಞೆ ಸ್ವೀಕರಿಸಲಾಯಿತು. ಈ ಸಮಯದಲ್ಲಿ ಅತಿಥಿ ಶಿಕ್ಷಕ ಮಾಧವ್, ರಾಜೇಶ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.