HomeStateಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ, ಪ್ರೋತ್ಸಾಹ ನೀಡಿ: ಪ್ರೊ.ಡಿ.ಶಿವಣ್ಣ

ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ, ಪ್ರೋತ್ಸಾಹ ನೀಡಿ: ಪ್ರೊ.ಡಿ.ಶಿವಣ್ಣ

ಬಾಗೇಪಲ್ಲಿ:  ಯಾವುದೇ  ಕ್ಷೇತ್ರದಲ್ಲಿರುವ  ಪ್ರತಿಭೆಗೆ ವಿಷೇಶವಾದಂತಹ ಪ್ರಾಮುಖ್ಯತೆ ನೀಡುವುದು ಪ್ತತಿಯೊಬ್ಬ ಕರ್ತವ್ಯವಾಗಿದೆ. ಪ್ರತಿಭೆಯನ್ನು ಗುರ್ತಿಸಿ, ಪ್ರೋತ್ಸಾಹಿಸಿ ಬೆಳೆಸಿದಾಗ ಮಾತ್ರ  ಯಾವುದೇ ದೇಶ ಅಭಿವೃದ್ದಿ ಹೊಂದಲು  ಸಾಧ್ಯವಾಗುತ್ತೆ ಎಂದು ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥರಾದ ಪ್ರೊ.ಡಿ.ಶಿವಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಯಂಗ್ ಇಂಡಿಯಾ ಶಾಲೆಯ ಆವರಣದಲ್ಲಿ ನಡೆದ ಅಭಿನಂಧನೆ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 6 ನೇ ರ್ಯಾಂಕ್ ಪಡೆದ ಲಕ್ಷ್ಮೀಲಿಶಾ ಮತ್ತು 7ನೇ ಪಡೆದ ಮನೋಜ್ ಕುಮಾರ್ ಅತ್ಯುತ್ತಮ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಮಾತನಾಡಿದ ಅವರು ಪ್ರತಿಭೆಗೆ  ವಿಷೇಶವಾದಂತಹ ಮಹತ್ವವನ್ನು ನೀಡುವುದು ಪ್ರತಿಯೊಬ್ಬ ಕರ್ತವ್ಯವಾಗಿದೆ. ಪ್ರತಿಭೆಯನ್ನು ಗುರ್ತಿಸಿ,ಪ್ರೋತ್ಸಹಿಸಿ ಬೆಳೆಸಿದ ಯಾವುದೇ ಒಂದು ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ದಿಯಲ್ಲಿ ಮುಂಜೂಣಿಯಲ್ಲಿರುತ್ತೆ ಎಂದರು.

honors to students in bagepalli

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಮ್ಮದೇ ಆದ ವಿಷೇಶ ಜ್ಞಾನ ಇರುತ್ತೆ ಆದರೆ ಸಾಧಿಸಬೇಕು ಎನ್ನುವ ಛಲ, ಶ್ರಮವಹಿಸಿದಾಗ ಮಾತ್ರ ಶಿಕ್ಷಣ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾದ್ಯವಾಗುತ್ತೆ ಎಲ್ಲದೆ ಸಾಧನೆಗೆ ಜಾತಿ, ಧರ್ಮ,ಬಡತನ ಇತ್ಯಾಧಿ ಅಡ್ಡಿಯಲ್ಲ ಎಂದ ಅವರು ಕಷ್ಟಪಟ್ಟು ಓದುವ ಬದಲಿಗೆ ಇಷ್ಟಪಟ್ಟು ಓದುವುದನ್ನು ಬಾಲ್ಯದಿಂದಲ್ಲೇ ರೂಢಿಸಿಕೊಳ್ಳುವಂತೆ  ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಮ್ಮ ಶಾಲೆಯ ವಿದ್ಯಾರ್ಥಿಗಳಾದ ಲಕ್ಷ್ಮೀಲಿಶಾ ಮತ್ತು ಮನೋಜ್ ಕುಮಾರ್ 10ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಸತತ 6 ಮತ್ತು 7ನೇ ರ್ಯಾಂಕ್ ಪಡೆಯುವ ಮೂಲಕ  ಬೆಂಗಳುರು ಸೇರಿದಂತೆ ವಿವಿಧ ನಗರ ಪ್ರದೇಶಗಳ ವಿದ್ಯಾರ್ಥಿಗಳಗಿಂತ ಬಾಗೇಪಲ್ಲಿಯಂತಹ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕಮ್ಮಿ ಇಲ್ಲ ಎಂಬುದನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳು ಮಾಡಿ ತೋರಿಸಿದ್ದಾರೆ ಎಂದರು.

ಯಂಗ್ ಇಂಡಿಯಾ ಶಾಲೆಯ  ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಸತತವಾಗಿ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಬೋರ್ಡ್‍ವತಿಯಿಂದ   ನಮ್ಮ ಶಾಲೆಗೆ ‘ಎ’ ಗ್ರೇಡ್  ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು ನಮ್ಮ ಶಾಲೆಯ ಈ ಸಾಧನೆಗೆ ಶಾಲೆಯ ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ಪೋಷಕರ ಶ್ರಮದಿಂದ ಸಾಧ್ಯವಾಗಿದೆ ಎಂದ ಅವರು ವಿದ್ಯಾರ್ಥಿಗಳಲ್ಲಿರುವ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಭವಿಷ್ಯತ್ತು ರೂಪಿಸಿಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಹಾಗೂ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಲಕ್ಷ್ಮೀಲಿಶಾ ಮತ್ತು ಮನೋಜ್ ಕುಮಾರ್ ಮತ್ತಿತರರು ಇದ್ದರು.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular