Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»School Day Event: ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರು ಗಮನ ಹರಿಸುತ್ತಿರಬೇಕು: ಬೈರಾರೆಡ್ಡಿ
    State

    School Day Event: ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರು ಗಮನ ಹರಿಸುತ್ತಿರಬೇಕು: ಬೈರಾರೆಡ್ಡಿ

    By by AdminJanuary 12, 2025Updated:January 12, 2025No Comments2 Mins Read
    Facebook Twitter Pinterest WhatsApp
    Praja vidya samste school day in gudibande 3

    School Day Event – ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಶಾಲೆಯಿಂದ ಬಂದ ಕೂಡಲೇ ಅವರು ಶಾಲೆಯಲ್ಲಿ ಏನು ಓದಿದ್ದಾರೆ ಎಂಬುದರ ಬಗ್ಗೆ ಗಮನ ಹರಿಸಬೇಕು. ಆಗ ಮಕ್ಕಳ ಶೈಕ್ಷಣಿಕ ಪರಿಸ್ಥಿತಿ ಹೇಗಿರುತ್ತದೆ ಎಂಬುದು ತಿಳಿಯುತ್ತದೆ ಎಂದು ಪ್ರಜಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬೈರಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚೆಂಡೂರು ಕ್ರಾಸ್ ಬಳಿಯಿರುವ ಪ್ರಜಾ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದವರು.

    Praja vidya samste school day in gudibande

    ಇತ್ತೀಚಿಗೆ ಪೋಷಕರು ತಮ್ಮ ಮಕ್ಕಳು ಹೇಗೆ ಓದುತ್ತಿದ್ದಾರೆ ಎಂಬುದನ್ನುಗಮನಿಸುತ್ತಿಲ್ಲ. ಪೋಷಕರು ಅವರದ್ದೇ ಆದ ಕೆಲಸಗಳಲ್ಲಿ ಬ್ಯುಸಿಯಾಗಿ ಬಿಡುತ್ತಾರೆ. ಇದರಿಂದಾಗಿ ತಮ್ಮ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳು ಹೇಗೆ ಓದುತ್ತಾರೆ, ಶಾಲೆಯಲ್ಲಿ ಏನೆಲ್ಲಾ ಹೋಂ ವರ್ಕ್ ಕೊಟ್ಟಿದ್ದಾರೆ ಎಂಬುದನ್ನು ಮಗು ಮನೆಗೆ ಬಂದ ಕೂಡಲೇ ಕೇಳಬೇಕು. ಜೊತೆಗೆ ಮಕ್ಕಳಿಗೆ ಮೊಬೈಲ್ ಗಳನ್ನು ನೀಡಬಾರದು. ಪ್ರಜಾ ವಿದ್ಯಾ ಸಂಸ್ಥೆ ಖಾಸಗಿ ಶಾಲೆಯಾದರೂ ಸಹ ಬೇರೆ ಶಾಲೆಗಳಿಂದ ಕಡಿಮೆ ವೆಚ್ಚದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದೆ. ಈ ಶಾಲೆಯ ಮುಖ್ಯ ಉದ್ದೇಶ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಮಾತ್ರ, ಯಾವುದೇ ರೀತಿಯ ಹಣ ಮಾಡುವು ಉದ್ದೇಶ ಹೊಂದಿಲ್ಲ. ಶಾಲೆಯನ್ನು ಮಾಜಿ ಶಾಸಕರಾದ ದಿವಂಗತ ಜಿ.ವಿ.ಶ್ರೀರಾಮರೆಡ್ಡಿಯವರು ಸ್ಥಾಪಿಸಿದ್ದು, ಇದೇ ಉದ್ದೇಶದಿಂದ ಎಂದರು.

    Praja vidya samste school day in gudibande 2

    ನಂತರ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳೂ ಸಹ ಇಂದು ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಬೇಸರಗೊಳ್ಳಬಾರದು. ಆ ಬೇಸರವನ್ನು ಬದಿಗಿಟ್ಟು ಛಲದಿಂದ ಓದಬೇಕು. ಆಗ ತಾವು ಅಂದುಕೊಂಡ ಗುರಿ ಮುಟ್ಟಲು ಸಾಧ್ಯವಾಗುತ್ತದೆ. ನಾನು ಸಹ ಅದೇ ರೀತಿಯಲ್ಲಿ ಓದಿ ಬೆಳೆದವನು. ಮುಂದಿನ ದಿನಗಳಲ್ಲಿ ನೀವೂ ಸಹ ಕಡಿಮೆ ಅಂಕ ಬಂದರೇ ನನ್ನ ಕೈಯಲ್ಲಿ ಓದಲು ಆಗೊಲ್ಲ ಎಂದು ಎದೆಗುಂದದೇ ಶಿಕ್ಷಕರ ಮಾರ್ಗದರ್ಶನ ಪಡೆದು ಒಳ್ಳೆಯ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

    Praja vidya samste school day in gudibande 1

    ಇದೇ ಸಮಯದಲ್ಲಿ ಇತ್ತೀಚಿಗೆ ತೆರೆಕಂಡ ಲವ್ ರೆಡ್ಡಿ ಎಂಬ ಸಿನೆಮಾದ ನಾಯಕ ಅಂಜನ್ ರಾಮಚಂದ್ರರೆಡ್ಡಿ ಮಾತನಾಡಿ, ನಾನು ಇದೇ ಭಾಗದಲ್ಲಿ ಬೆಳೆದವನು. ಇದು ಹೋರಾಟಗಳ ಬೀಡು. ಮಾಜಿ ಶಾಸಕರಾದ ದಿವಂಗತ ಜಿ.ವಿ.ಶ್ರೀರಾಮರೆಡ್ಡಿಯವರು ಸ್ಥಾಪನೆ ಮಾಡಿದ ಶಾಲೆಯಲ್ಲಿ ಓದುತ್ತಿರುವ ನೀವುಗಳು ಅವರಂತೆ ಹೋರಾಟದ ಗುಣಗಳನ್ನು, ಸಿದ್ದಾಂತಗಳನ್ನು ಮೈಗೂಡಿಸಿಕೊಳ್ಳಬೇಕು. ಬಡವರ ಸಮಸ್ಯೆ ಎಂದ ಕೂಡಲೇ ಅವರು ಎಲ್ಲಿಗೆ ಬೇಕಾದರೂ ಹೋಗುತ್ತಿದ್ದರು. ಅವರನ್ನು ಕಳೆದುಕೊಂಡಿರುವುದು ಈ ಭಾಗಕ್ಕೆ ತುಂಬಾ ನಷ್ಟ ಎಂದೇ ಭಾವಿಸುತ್ತೇನೆ. ನಿಮ್ಮಲ್ಲಿ ಅಪಾರವಾದ ಪ್ರತಿಭೆಯಿರುತ್ತದೆ. ನೀವುಗಳು ಅದನ್ನು ಹೊರತೆಗೆಯುವ ಕೆಲಸ ಮಾಡಬೇಕು. ಆಗ ನಿಮ್ಮ ಅಭಿರುಚಿಗೆ ತಕ್ಕಂತೆ ಸಾಧನೆ ಮಾಡಲು ಸಾಧ್ಯವೆಂದರು.

    ಶಾಲಾ ವಾರ್ಷಿಕೋತ್ಸವದಲ್ಲಿ ಶಾಲೆಯ ಮಕ್ಕಳು ವಿವಿಧ ಹಾಡುಗಳಿಗೆ ನೃತ್ಯ ರೂಪಕಗಳನ್ನು ಪ್ರದರ್ಶನ ಮಾಡಿ ಎಲ್ಲರ ಮನಗೆದ್ದರು. ಈ ವೇಳೆ ಶಾಲೆಯ ಕಾರ್ಯದರ್ಶಿ ಆರ್‍.ಎನ್.ರಾಜು, ಖಜಾಂಚಿ ಮಧು, ಶಾಲೆಯ ಸದಸ್ಯರಾದ ಮುನಿವೆಂಕಟಪ್ಪ, ಗೊಪಾಲಕೃಷ್ಣ, ಕೆ.ವಿ.ಅಶೋಕ್, ಪ್ರಜಾ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಮಂಜುಳಾ ಸೇರಿದಂತೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

    Cultural Events Dance G V Sriramareddy Kannada News Love reddy movie School Day Event Students
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.