Siddaramaiah – ರಾಜ್ಯ ರಾಜಕಾರಣದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದಂತಹ (MUDA SCAM) ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಆ.17 ರಂದು ಸಿಎಂ ಸಿದ್ದರಾಮಯ್ಯರವರ (Siddaramaiah) ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಈ ಸುದ್ದಿ ಇದೀಗ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. (Siddaramaiah) ಸಿಎಂ ಪರ ಕಾಂಗ್ರೇಸ್ ನಾಯಕರು ಮಾತನಾಡುತ್ತಿದ್ದರೇ, ವಿರೋಧ ಪಕ್ಷದ ನಾಯಕರುಗಳು ಸಿಎಂ ರಾಜಿನಾಮೆಗೆ ಆಗ್ರಹಿಸುತ್ತಿದ್ದಾರೆ. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು (Siddaramaiah) ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಸೂಚನೆ ನೀಡಿದೆ ಎನ್ನಲಾಗಿದೆ.
ಈ ಕುರಿತು ಸಿಎಂ (Siddaramaiah) ಸಿದ್ದರಾಮಯ್ಯ ಸಹ ಪ್ರತಿಕ್ರಿಯೆ ನೀಡಿದ್ದು, ಇದು ನನ್ನ ವಿರುದ್ದ ನಡೆದಂತಹ ದೊಡ್ಡ ಷಡ್ಯಂತ್ರ. ಈ ಸಂಬಂಧ ನಾನು ಕಾನೂನಿನ ಅಡಿಯಲ್ಲಿ ಹೊರಾಟ ಮಾಡುತ್ತೇನೆ. ಈ ರೀತಿಯಾಗುತ್ತದೆ ಎಂದು ನಾನು ನಿರೀಕ್ಷೆ ಮಾಡಿದ್ದೇ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ರವರ ಬಗ್ಗೆ ಸಹ ರಾಜ್ಯಪಾಲರಿಗೆ ದೂರು ನೀಡಿದ್ದರು. ಅ(Siddaramaiah) ದೆಲ್ಲಾ ಹಾಗೆಯೇ ಇದೆ ಆದರೆ ನನ್ನ ವಿರುದ್ದ ಇಷ್ಟೊಂದು ಶೀಘ್ರವಾಗಿ ಹೇಗೆ ನೀಡುತ್ತಾರೆ. ನನ್ನ ವಿರುದ್ದ ದೂರು ಬಂದಾಗಲೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಲು ತಯಾರಿ ಮಾಡಿಕೊಂಡಿದ್ದರು. (Siddaramaiah) ರಾಜ್ಯಪಾಲರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ಎಲ್ಲವನ್ನೂ ಕಾನೂನಿನಂತೆ ಹೋರಾಟ ಮಾಡುತ್ತೇನೆ. ನಾನು (Siddaramaiah) ರಾಜಿನಾಮೆ ನೀಡುವಷ್ಟು ತಪ್ಪು ಮಾಡಿಲ್ಲ ಎಂದಿದ್ದಾರೆ.
ಇನ್ನೂ ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಹಲವು ಕಡೆ (Siddaramaiah) ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೆಪಿಸಿಸಿ ಸೋಮವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೇಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಎಐಸಿಸಿ (Siddaramaiah) ನಾಯಕರಾದ ಕೆ.ಸಿ.ವಣುಗೋಪಾಲ್, ಉಸ್ತುವಾರಿ ಸಚಿವ ಸುರ್ಜೇವಾಲಾ ಸಿಎಂ ರವರಿಗೆ ಕರೆ ಮಾಡಿ ಅಭಯ ನೀಡಿದ್ದಾರೆ. ಈ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಹಾಗೂ ಕಾನೂನಿನಂತೆ ಹೋರಾಟ ಮಾಡೋಣ ಎಂದು (Siddaramaiah) ಧೈರ್ಯ ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ (Siddaramaiah) ಚಿತ್ರರ್ದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಕಡೆ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವೊಂದು ಕಡೆ ಟೈರ್ ಸುಟ್ಟು, ರಸ್ತೆ ತಡೆ ನಡೆಸಿ ಗೋ ಬ್ಯಾಕ್ ಎಂಬ ಘೋಷಣೆಗಳನ್ನು ಕೂಗುತ್ತಾ ಆಕ್ರೋಷ ಹೊರಹಾಕುತ್ತಿದ್ದಾರೆ. (Siddaramaiah) ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಆ ಸ್ಥಾನದಿಂದ ವಜಾ ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬಾರದೆಂದು ಆಗ್ರಹಿಸಿದ್ದಾರೆ.