Close Menu
ISM Kannada News
    IPL 2025 Live Score
    What's Hot

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    May 14, 2025

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»test»Siddaramaiah: ಹಾಸನ ಜನಕಲ್ಯಾಣ ಸಮಾವೇಶದಲ್ಲಿ ಭಾವುಕರಾದ ಸಿಎಂ, ಅಂತಿಮವಾಗಿ ಗೆಲ್ಲೋದು ಸತ್ಯ ಎಂದ ಸಿದ್ದರಾಮಯ್ಯ….!
    test

    Siddaramaiah: ಹಾಸನ ಜನಕಲ್ಯಾಣ ಸಮಾವೇಶದಲ್ಲಿ ಭಾವುಕರಾದ ಸಿಎಂ, ಅಂತಿಮವಾಗಿ ಗೆಲ್ಲೋದು ಸತ್ಯ ಎಂದ ಸಿದ್ದರಾಮಯ್ಯ….!

    By by AdminDecember 6, 2024No Comments2 Mins Read
    Facebook Twitter Pinterest WhatsApp
    Siddaramaiah speech in hasana samavesha 1

    Table of Contents

    Toggle
    • ಸಿಎಂ ಸಿದ್ದರಾಮಯ್ಯ ಟ್ವೀಟ್ : Click Here

    Siddaramaiah  – ಹಾಸನದಲ್ಲಿ ನಡೆದ ಕಾಂಗ್ರೇಸ್ ಜನಕಲ್ಯಾಣೋತ್ಸವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದೆ ಕಾಂಗ್ರೇಸ್ ಈ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದು, ಈ ಉಪಚುನಾವಣೆಯ ಸಮಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಆಡಿದ್ದಂತಹ ಮಾಡುಗಳಿಗೆ ಕೌಂಟರ್‍ ಕೊಟ್ಟಿದ್ದಾರೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ ಭಾವುಕರಾಗಿ ಅಂತಿಮವಾಗಿ ಗೆಲ್ಲೋದು ಮಾತ್ರ ಸತ್ಯ ಎಂದಿದ್ದಾರೆ.

    Siddaramaiah speech in hasana samavesha 2

    ಜನ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಜನಕಲ್ಯಾಣೋತ್ಸವ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ. ನನ್ನ ಹಾಗೂ ಪಕ್ಷದ ಮೇಲಿನ ಪ್ರೀತಿಯಿಂದ ದೂರದ ಊರುಗಳಿಂದ ಆಗಮಿಸಿ, ಅಪಪ್ರಚಾರ, ದ್ವೇಷರಾಕಾರಣ, ಅನ್ಯಾಯದ ವಿರುದ್ದ ನನ್ನ ದನಿಗೆ ದನಿಗೂಡಿಸಿದ ನನ್ನೆಲ್ಲಾ ಅಭಿಮಾನಿಗಳಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಚಿರ ಋಣಿಯಾಗಿದ್ದೇನೆ. ಜೊತೆಗೆ ಈ ಸಮಾವೇಶದ ಆಯೋಜನೆಗೆ ಶ್ರಮಿಸಿದ ಶೋಷಿತ ಸಮುದಾಯಗಳು, ಸಂಘಟನೆಗಳು ಹಾಗೂ ಪಕ್ಷದ ನಾಯಕರಿಗೆ ಅನಂತ ಧನ್ಯವಾದಗಳು. ಜನತೆಯ ಸೇವೆಯೇ ಜನಾರ್ಧನನ ಸೇವೆ. ಜನ ಸೇವೆ ಮಾಡಲು ಒದಗಿಬಂದ ಅವಕಾಶ ಅಧಿಕಾರ ಎಂದು ಪ್ರಾಮಾಣಿಕವಾಗಿ ನಂಬಿದವನು ನಾನು ಎಂದು ಹೇಳಿದರು.

    ಸಿಎಂ ಸಿದ್ದರಾಮಯ್ಯ ಟ್ವೀಟ್ : Click Here

    ಸತ್ಯ, ಧರ್ಮ ಮತ್ತು ನ್ಯಾಯದ ನಡಿಗೆಯಲ್ಲಿ ನನ್ನ ಜೊತೆ ಈ ನಾಡಿನ ಪ್ರಜ್ಞಾವಂತರು, ಶೋಷಿತ ಜನರು ಇದ್ದಾರೆ ಎಂಬುದಕ್ಕೆ ಇಂದು ಸೇರಿದ್ದ ಜನಸಾಗರ ಸಾಕ್ಷಿ. ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ ಇರುವ ವರೆಗೆ ರಾಜಕೀಯ ವಿರೋಧಿಗಳ ಯಾವ ಷಡ್ಯಂತ್ರ, ಬೆದರಿಕೆಗಳಿಗೆ ನಾನು ಜಗ್ಗುವುದೂ ಇಲ್ಲ, ಕುಗ್ಗುವುದೂ ಇಲ್ಲ. ಎಲ್ಲವನ್ನೂ ಎದುರಿಸಿ ಗೆಲ್ಲುತ್ತೇನೆ. ನಾನು ಸತ್ಯದ ಪರವಾಗಿದ್ದೇನೆ, ಅಂತಿಮವಾಗಿ ಗೆಲ್ಲುವುದು ಸತ್ಯವೇ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿ ಮಾತನಾಡಿದರು.

    Siddaramaiah speech in hasana samavesha 3

    ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು. ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಇದು ಶತಸಿದ್ಧ. ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿವೆ. ಕಾರ್ಯಕ್ರಮದ ಆಯೋಜಕರೆಲ್ಲರಿಗೂ ಧನ್ಯವಾದಗಳು ಎಂದರು.

    BJP D K Shivakumar Janakalyana Samavesha JDS MUDA Case Siddaramaiah
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Gruhalakshmi : ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ! ಮೇ ತಿಂಗಳಲ್ಲಿ ನಿಮ್ಮ ಖಾತೆಗೆ ಬರಲಿದೆ ಮೂರು ತಿಂಗಳ ಹಣ – ಸಚಿವೆ ಹೆಬ್ಬಾಳ್ಕರ್ ಭರವಸೆ

    April 30, 2025

    Bride – ಮೆಹಂದಿ ಹಾಕಿಸಿಕೊಂಡು ಹೋದ ವಧು ನಾಪತ್ತೆ, ರದ್ದಾದ ಮದುವೆ, ಮಂಗಳೂರಿನಲ್ಲಿ ನಡೆದ ಘಟನೆ….!

    April 21, 2025
    Leave A Reply Cancel Reply

    IPL 2025 Live Score
    Don't Miss

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    State May 14, 2025

    Ramanagara – ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದ ಅಮಾನುಷ ಘಟನೆಯೊಂದು ತೀವ್ರ ಆಘಾತವನ್ನುಂಟು ಮಾಡಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ…

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025

    ICSI Recruitment 2025 : 54 ರಿಸರ್ಚ್ ಅಸೋಸಿಯೇಟ್ & ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

    May 14, 2025

    Virat Kohli – ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ: ಇದರ ವಿಶೇಷತೆ ಏನು?

    May 14, 2025

    Namma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ ಸಂದರ್ಶನ…!

    May 14, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.