Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Tirupati: ತಿರುಪತಿಯಲ್ಲಿ ಕಾಲ್ತುಳಿತ, 7 ಮಂದಿ ಮೃತ, ಅಧಿಕ ಮಂದಿಗೆ ಗಾಯ, ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ…!
    National

    Tirupati: ತಿರುಪತಿಯಲ್ಲಿ ಕಾಲ್ತುಳಿತ, 7 ಮಂದಿ ಮೃತ, ಅಧಿಕ ಮಂದಿಗೆ ಗಾಯ, ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ…!

    By by AdminJanuary 9, 2025No Comments2 Mins Read
    Facebook Twitter Pinterest WhatsApp
    tirupati stampede 7 dead 0

    Tirupati – ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಸಮಯದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಸುಮಾರು ಮಂದಿಗೆ ಗಾಯಗಳಾಗಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕು ನುಗ್ಗಲು ಉಂಟಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

    tirupati stampede 7 dead

    ತಿರುಮಲದ ವೈಕುಂಠ ದ್ವಾರ ಸರ್ವದರ್ಶನ ಟೋಕನ್ ಗಳನ್ನು ತೆಗೆದುಕೊಳ್ಳುವಾಗ ಈ ನೂಕು ನುಗ್ಗಲು ಸಂಭವಿಸಿದೆ. ತಿರುಪತಿಯ ವಿಷ್ಣು ನಿವಾಸದ ಬಳಿ ದರ್ಶನದ ಟಿಕೆಟ್ ಗಳನ್ನು ಪಡೆದುಕೊಳ್ಳಲು ಭಕ್ತರು ಜಮಾಯಿಸಿದ್ದಾರೆ. ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ನೂಕು ನುಗ್ಗಲಿನಲ್ಲಿ ತಮಿಳುನಾಡು ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮತ್ತಷ್ಟು ಮಂದಿ ಗಾಯಗೊಂಡಿದ್ದು, ಈ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಜನವರಿ 10 ರಂದು ವೈಕುಂಠ ಏಕಾದಶಿಯ ಹಿನ್ನಲೆಯಲ್ಲಿ ತಿರುಪತಿಯ ಕೌಂಟರ್‌ಗಳಲ್ಲಿ ಇಂದು ಟಿಕೆಟ್‌ ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ಸಾವಿರಾರು ಮಂದಿ ಏಕಕಾಲಕ್ಕೆ ಕೌಂಟರ್‌ ಬಳಿ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಇದರ ವಿಡಿಯೋಗಳು ಕೂಡ ತುಂಬಾ ಭಯಾನಕವಾಗಿದೆ ಎನ್ನಲಾಗಿದೆ. ನೆಲದಲ್ಲಿ ಬಿದ್ದ ವ್ಯಕ್ತಿಗಳನ್ನು ಬದುಕಿಸಲು ಪೊಲೀಸರು ಸಿಪಿಆರ್‌ ನಡೆಸುತ್ತಿರುವ ದೃಶ್ಯಗಳೂ ಸಹ  ಹರಿದಾಡುತ್ತಿವೆ. ಇನ್ನೂ ವಿಷ್ಣು ನಿವಾಸಂ ಕೌಂಟರ್‌ನ 9 ಕೇಂದ್ರದ 94 ಕೌಂಟರ್‌ಗಳಲ್ಲಿ ಟಿಕೆಟ್‌ ಮಾರಾಟ ಮಾಡಲು ಟಿಟಿಡಿ ನಿರ್ಧಾರ ಮಾಡಿತ್ತು. ಟಿಕೆಟ್‌ ಮಾರಾಟ ಪ್ರಕ್ರಿಯೆ ಆರಂಭವಾಗಲು ಇನ್ನೂ ಸಮಯವಿದ್ದ ಕಾರಣ ಪೊಲೀಸರು ಕೂಡ ಎಚ್ಚರಿಕೆಯಿಂದ ಕ್ಯೂ ಮೇಂಟೇನ್‌ ಮಾಡಲು ಕಾರ್ಯನಿರ್ವಹಿಸಿದ್ದರು. ರಸ್ತೆಗಳಲ್ಲಿಯೇ ನಿಂತು ಭಕ್ತರು ಗೋವಿಂದ ಭಜನೆ ಮಾಡುತ್ತಿದ್ದರು.  ಇನ್ನೂ ಉಚಿತ ದರ್ಶನ ಟಿಕೆಟ್‌ಗಾಗಿ ದೊಡ್ಡ ಪ್ರಮಾಣದಲ್ಲಿ ಭಕ್ತರು ಕೌಂಟರ್‌ ಎದುರು ಜಮಾಯಿಸಿದ್ದಾರೆ. ಗುರುವಾರ ಮುಂಜಾನೆ 5 ಗಂಟೆಯ ಬದಲಿಗೆ, ಮಧ್ಯರಾತ್ರಿ 12 ಗಂಟೆಯಿಂದಲೇ ಟಿಕೆಟ್‌ ವಿತರಣೆ ಆರಂಭವಾಗಲಿದೆ ಎಂಬ ಮಾಹಿತಿಯೊಂದು ಹರಿದಾಡಿತ್ತು. ಈ ಕಾರಣದಿಂದ ಹೆಚ್ಚು ಜನರು ಜಮಾಯಿಸಿದ ಕಾರಣ ನೂಕುನುಗ್ಗಲು ಸಂಭವಿಸಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

    tirupati stampede 7 dead modi

    ಪ್ರಧಾನಿ ನರೇಂದ್ರ ಮೋದಿ ಸಂತಾಪ: ಇನ್ನೂ ಈ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ತಿರುಮಲ ವೆಂಕಟೇಶ್ವರ ಸ್ವಾಮಿ ವೈಕುಂಠ ದರ್ಶನಕ್ಕೆ ಟಿಕೆಟ್ ನೀಡುವ ಕೌಂಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಕೆಲ ಭಕ್ತರು ಸಾವನ್ನಪ್ಪಿರುವುದು ದುರದೃಷ್ಟಕರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೆ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ತಮ್ಮ ಎಕ್ಸ್ (ಟ್ವಿಟರ್‍)​ನಲ್ಲಿ ಪೋಸ್ಟ್​ ಮಾಡಿದ್ದಾರೆ.

    tirupati stampede 7 dead chandrababu

    ತೀವ್ರ ಆಘಾತ ವ್ಯಕ್ತಪಡಿಸಿದ ಆಂಧ್ರ ಸಿಎಂ: ತಿರುಪತಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆ ಕುರಿತು ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ ಎನ್ನಲಾಗಿದ್ದು, ಇಂದು ತಿರುಪತಿಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿದುಬಂದಿದೆ.

    tirupati stampede 7 dead Rahul

    ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಸಂತಾಪ: ‌ಇನ್ನೂ ತಿರುಪತಿಯಲ್ಲಿ ಸಂಭವಿಸಿದ ದುರಂತ ಕಾಲ್ತುಳಿತವು ತುಂಬಾ ದುಃಖಕರವಾದ ವಿಚಾರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರೆಲ್ಲಾ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ನಾನು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಕೋರುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್‌(ಟ್ವಿಟರ್‍)​ನಲ್ಲಿ  ಪೋಸ್ಟ್ ಮಾಡಿದ್ದಾರೆ.

    C M Chandrababu Naidu Devotees dead in Tirupati Narendra Modi Rahul Gandhi Tirumala TIRUPATI Tirupati news updates Tirupati tragedy Vaikunta Dwara Darshana
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Death : ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ದುರಂತ ಸಾವು: ಪೋಷಕರ ಅನುಮಾನ!

    May 18, 2025

    Jan Aushadhi Kendra – ಸರ್ಕಾರಿ ಆಸ್ಪತ್ರೆ ಆವರಣದ ಜನ ಔಷಧಿ ಕೇಂದ್ರಗಳು ಮುಚ್ಚಲಿವೆ: ಇಲ್ಲಿದೆ ಕಾರಣ…!

    May 18, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.