Viral – ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಅಮಾನವೀಯ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪತಿಯೊಬ್ಬ ₹80 ಸಾವಿರ ಸಾಲ ಮರುಪಾವತಿಸದ ಕಾರಣ, ಅವರ 29 ವರ್ಷದ ಪತ್ನಿಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿ, ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
Viral – ಏನಿದು ಘಟನೆ?
ಕೆಲ ವರ್ಷಗಳ ಹಿಂದೆ ತಿಮ್ಮರಾಯಪ್ಪ ಎಂಬಾತ ಗ್ರಾಮಸ್ಥರಿಂದ ₹80,000 ಸಾಲ ಮಾಡಿದ್ದನು. ಆದರೆ, ಆತ ಈವರೆಗೂ ಅದನ್ನು ಮರುಪಾವತಿಸಿಲ್ಲ. ಅಷ್ಟೇ ಅಲ್ಲದೆ, ಕಳೆದ ಕೆಲವು ತಿಂಗಳಿಂದ ಆತ ಊರಿನಲ್ಲಿ ಕಾಣಿಸುತ್ತಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಲ ನೀಡಿದವರು ಆತನ ಪತ್ನಿ ಸಿರಿಷಾ ಅವರನ್ನು ವಿಚಾರಿಸಿದ್ದಾರೆ. ಆಗ ಸಿರಿಷಾ, “ನನ್ನಿಂದ ಸಾಲ ತೀರಿಸಲು ಸಾಧ್ಯವಿಲ್ಲ. ನನ್ನ ಪತಿ ನನ್ನನ್ನು ಬಿಟ್ಟು ಹೋಗಿದ್ದಾರೆ. ಕಳೆದ 6 ತಿಂಗಳಿಂದ ಅವರು ನನ್ನ ಸಂಪರ್ಕದಲ್ಲಿ ಇಲ್ಲ,” ಎಂದು ಹೇಳಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here
ಇದರಿಂದ ಆಕ್ರೋಶಗೊಂಡ ಸಾಲ ನೀಡಿದವರು, ಸಿರಿಷಾ ಅವರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಸಾಲ ನೀಡಿದ ಕುಟುಂಬದ ಪ್ರಕಾರ, “ಸಿರಿಷಾ ಊರು ಬಿಟ್ಟು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿದ್ದರು, ಅಲ್ಲಿ ಅವರ ಪತಿ ಇದ್ದಾರೆ. ಆ ಕಾರಣದಿಂದಲೇ ನಾವು ಅವರನ್ನು ತಡೆದಿದ್ದೇವೆ,” ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ. Read this also : ಹೆಂಡತಿಯನ್ನು ಬಾಲ್ಕನಿಯಲ್ಲಿ ನೇತುಹಾಕಿದ ಪತಿ – ಭಯಾನಕ ದೃಶ್ಯ, ರಿಷಿಕೇಶ್ ನಲ್ಲಿ ನಡೆದ ಘಟನೆ…!
Viral – ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಖಂಡನೆ
ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಈ ಘಟನೆಗೆ ಸಂಬಂಧಿಸಿದಂತೆ ಮುನಿಕನ್ನಪ್ಪ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.